ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |

September 21, 2024
2:18 PM

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ ಸಮೀಕ್ಷೆಯಲ್ಲಿ ದಾಖಲಾಗದೇ ಇರುವಂತಹ ರೈತರನ್ನು ಗುರುತಿಸಿ, ಅವರಿಗೂ ಸಹ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯ ಜಗದೀಶ ಶೆಟ್ಟರ್ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಜಿ+೩ ಮಾದರಿ ಮನೆಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು.  ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದಂತಹ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.  ಬೆಳಗಾವಿಯ ತರಕಾರಿ ಹಾಗೂ ಹಣ್ಣುಗಳ ಮಾರುಕಟ್ಟೆಯನ್ನು ವಿಸ್ತರಿಸಲು ಗಮನ ಹರಿಸಬೇಕು. ಜೊತೆಗೆ ಶೀಥಿಲ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಜಗದೀಶ ಶೆಟ್ಟರ್ ನಿರ್ದೇಶಿಸಿದರು.‌ (Source: D D)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror