ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ ಸಮೀಕ್ಷೆಯಲ್ಲಿ ದಾಖಲಾಗದೇ ಇರುವಂತಹ ರೈತರನ್ನು ಗುರುತಿಸಿ, ಅವರಿಗೂ ಸಹ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯ ಜಗದೀಶ ಶೆಟ್ಟರ್ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಜಿ+೩ ಮಾದರಿ ಮನೆಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದಂತಹ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು. ಬೆಳಗಾವಿಯ ತರಕಾರಿ ಹಾಗೂ ಹಣ್ಣುಗಳ ಮಾರುಕಟ್ಟೆಯನ್ನು ವಿಸ್ತರಿಸಲು ಗಮನ ಹರಿಸಬೇಕು. ಜೊತೆಗೆ ಶೀಥಿಲ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಬೇಕು ಎಂದು ಜಗದೀಶ ಶೆಟ್ಟರ್ ನಿರ್ದೇಶಿಸಿದರು. (Source: D D)
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ…
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್…
ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…
ನಾಗಾಲ್ಯಾಂಡ್ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…
ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…