Advertisement
Opinion

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

Share

ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಎಂಬುದು ಮಕ್ಕಳು ಐದನೇ ತರಗತಿ ಕಲಿಕೆಯಿಂದಲೇ ಅವುಗಳ ಪರಿಚಯ ಮಾಡಲು ಸಾಧ್ಯವಿದೆ. ಕೇಂದ್ರ ಸರಕಾರದ ಸಿಬಿಎಸ್ಸಿ ವಿಷಯಗಳ ನವೋದಯ ಹಾಗೂ ಸಿಬಿಎಸ್ಸಿ ಮತ್ತು ಐಸಿಎಸ್ಸಿ ವಿಷಯಗಳನ್ನು ಒಳಗೊಂಡ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗಳು ಹಾಗೂ ರಾಜ್ಯ ಪಠ್ಯಪುಸ್ತಕಗಳ ವಿಷಯಗಳೊಳಗೊಂಡ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರವೇಶ ಪರೀಕ್ಷೆಗಳು ನಡೆಯುತ್ತಿವೆ.

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ ಪಠ್ಯಗಳು ಇವೆ. ಹಾಗಾಗಿ ಹೆಚ್ಚಿನ ಮಕ್ಕಳಿಗೆ ಈ ಪರೀಕ್ಷೆಯು ಉಪಯುಕ್ತವಾಗಿದೆ.

ನವೋದಯ ಪ್ರವೇಶ ಪರೀಕ್ಷಾ ಅರ್ಜಿ ಸಲ್ಲಿಕೆಯು ಈಗಾಗಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕರೆಯಲಾಗಿದೆ. ಜುಲೈ 29 ಕೊನೆಯ ದಿನವಾಗಿದೆ. ಉಳಿದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆ ಇನ್ನಷ್ಟೆ ಬರಬೇಕಿದೆ.

ಮಕ್ಕಳನ್ನು ಇಂಥ ಪರೀಕ್ಷೆಗೆ ಅಭ್ಯಾಸ ಮಾಡುವುದರಿಂದ ಅವರಲ್ಲಿ ಎಳವೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪರಿಚಯಿಸುವ ಒಂದು ಕಲ್ಪನೆ ಮೂಡುತ್ತದೆ. ಪ್ರತಿಯೊಂದು ಕಲಿಕೆಯು ಅನುಭವದ ಕಲಿಕೆ ಆಗಿರಬೇಕು ಜೊತೆಗೆ ಮಕ್ಕಳಿಗೆ ಜ್ಞಾನದ ಮಟ್ಟವನ್ನು ಅರಿಯುವಂತೆ ಆಗಬೇಕು. ಈ ನಿಟ್ಟಿನಲ್ಲಿ ಇಂಥ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಪೂರಕವಾಗಿವೆ. ಇಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾಗಿ ಶಾಲೆಗಳಿಗೆ ಸೇರ್ಪಡೆಗೊಳ್ಳುವುದು ಮುಖ್ಯವಲ್ಲ. ಈ ಪರೀಕ್ಷೆಯ ಅನುಭವ ಪಡೆದುಕೊಳ್ಳುವುದು ಮುಖ್ಯವಾಗಿದೆ. ಆಸಕ್ತಿ ಇರುವವರು ಆಯ್ಕೆಯ ನಂತರ ತಮ್ಮ ವಿದ್ಯಾಭ್ಯಾಸವನ್ನು ವಸತಿ ಶಾಲೆಗಳಲ್ಲಿ ಮುಂದುವರಿಸಬಹುದು ಆದರೆ ಇಂಥ ಅವಕಾಶಗಳು ಈ ಒಂದು ಕಾಲಘಟ್ಟದಲ್ಲಿ ಮಾತ್ರ ಸಿಗುವುದರಿಂದ ಹೆಚ್ಚಿನ ಮಕ್ಕಳು ಮತ್ತು ಪೋಷಕರು ಇದರ ಬಗ್ಗೆ ಗಮನಹರಿಸಿ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಅವರನ್ನು ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಪೋಷಕರ ಕರ್ತವ್ಯವು ಆಗಿದೆ.

ಈ ನಿಟ್ಟಿನಲ್ಲಿ ಗ್ರಾಮೀಣ ಪರಿಸರದಲ್ಲಿ ಮಕ್ಕಳ ಜ್ಞಾನ ವರ್ಧನೆ ಹಾಗೂ ಮಕ್ಕಳಿಗೆ ಅರಿವು ಮೂಡಿಸುವ ಸಲುವಾಗಿ ಕಳೆದ ಏಳು ವರ್ಷಗಳಿಂದ ನಾವು ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಿದ್ದೇವೆ. ಹಲವಾರು ವಿದ್ಯಾರ್ಥಿಗಳು ಆಯ್ಕೆಯಾಗಿ ನವೋದಯ, ಮೊರಾರ್ಜಿ ವಸತಿ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

ಪಸ್ತುತ ವರುಷವು ಕೂಡ ಗುತ್ತಿಗಾರು ಅರಿವು ಕೇಂದ್ರದಲ್ಲಿ ಮಕ್ಕಳ ಬೌದ್ಧಿಕ ಚಟುವಟಿಕೆಗಳ ಮೂಲಕ ಗ್ರಂಥಾಲಯದ ಸದ್ಬಳಕೆ ಮತ್ತು ಮಕ್ಕಳಲ್ಲಿ ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವುದು ಜೊತೆಗೆ ಉತ್ತಮ ಕಲಿಕಾ ವಿಧಾನದೊಂದಿಗೆ ಮಕ್ಕಳಲ್ಲಿ ಜ್ಞಾನ ವರ್ದನೆ ಮಾಡುವ ಕಾರ್ಯ ನಡೆಯುತ್ತಿದೆ. ಮಕ್ಕಳು ಪೋಷಕರು ಇದರ ಸದ್ಭಳಕೆ ಮಾಡಿಕೊಳ್ಳಬಹುದು.

2025-26 ಸಾಲಿನ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಗುತ್ತಿಗಾರು ಅರಿವು ಕೇಂದ್ರ (ಗ್ರಂಥಾಲಯ)ದಲ್ಲಿ ತರಬೇತಿ ನೀಡಲಾಗುವುದು. ದಿನಾಂಕ 15-06-2025 ರಿಂದ ಪ್ರತಿ ಆದಿತ್ಯವಾರ ಆಸಕ್ತ ವಿದ್ಯಾರ್ಥಿಗಳಿಗೆ ತರಬೇತಿ ನಡೆಯಲಿದೆ. ಸಂಪರ್ಕಿಸಿ : 9448845322 , 80731 17026

ಬರಹ :
ದಿವ್ಯ ಸುಜನ್ ಗುಡ್ಡೆಮನೆ
, ಶ್ರೀ ದುರ್ಗಾ ತರಬೇತಿ ಕೇಂದ್ರ , ಗುತ್ತಿಗಾರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

23 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

23 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago