Advertisement
MIRROR FOCUS

ಅವಧಿ ಮೀರಿದ ಪದಾರ್ಥಗಳ ಮಾರಾಟ ಕುರಿತ ದೂರು | ಸಿಎಂ ಸೂಚನೆ ಬೆನ್ನಲ್ಲೇ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು | ಹಲವೆಡೆ ಕ್ರಮ

Share

ಬಸ್ ನಿಲ್ದಾಣ(Bus Stand), ವ್ಯಾಪಾರ ಮಳಿಗೆ(Commercial complex)  ಮತ್ತು ಆಹಾರ ಉದ್ದಿಮೆಗಳಲ್ಲಿ(Food industry) ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ (Expired Ingredients Sales) ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಬಿತ್ತರವಾದ ಸುದ್ದಿ ಅನ್ವಯ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳಿಂದ ಕ್ರಮದ ಕುರಿತು ಸಿಎಂ ಕಚೇರಿಯಿಂದ (CM Of Karnataka office) ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.  ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 (Food Security Act 2006) ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

21 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

21 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago