Advertisement
ಸಂಪಾದಕೀಯ ಆಯ್ಕೆ

ಅಡಿಕೆ ಅಕ್ರಮ ಸಾಗಾಟ ಪ್ರಕರಣ | ತನಿಖೆ ಆರಂಭಿಸಿದ ಮೇಘಾಲಯ ಸರ್ಕಾರ |

Share

 ಬಾಂಗ್ಲಾದೇಶದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಕುರಿತು ಇದೀಗ ತನಿಖೆಗೆ ಮೇಘಾಲಯ ಸರ್ಕಾರ ಮುಂದಾಗಿದೆ. ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಮೇಘಾಲಯದ ಉತ್ತರ ಗರೋ ಹಿಲ್ಸ್‌ನ ಜಿಲ್ಲಾಧಿಕಾರಿ ಕುಮಾರಿ ಮಿಥಾಲಿ ಚಂದ್ರ ಅವರು ತನಿಖೆ ಆರಂಭಿಸಿದ್ದಾರೆ.

ಅಡಿಕೆಯಲ್ಲಿ ಬರ್ಮಾದಿಂದ ಬಾಂಗ್ಲಾದೇಶದ ಮೂಲಕ ವಿವಿಧ ಮಾರ್ಗದ ಮೂಲಕ ಭಾರತದೊಳಕ್ಕೆ ಸಾಗಿಸಲಾಗುತ್ತಿತ್ತು. ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳ ವಿವಿಧ ಪ್ರದೇಶಗಳ ಮೂಲಕ ಸಾಗಾಟವಾಗುತ್ತಿತ್ತು. ಇದೆಲ್ಲಾ ಅಂತಿಮವಾಗಿ ಅಸ್ಸಾಂನ ಮಟಿಯಾ ಪ್ರದೇಶದಲ್ಲಿ ದಾಸ್ತಾನುಗೊಂಡು ಬಳಿಕ ದೇಶದ ವಿವಿಧ ರಾಜ್ಯಗಳಿಗೆ, ವಿವಿಧ ಮಾರುಕಟ್ಟೆಗೆ ಸಾಗಾಟ ಮಾಡಲಾಗುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಈ ಸಾಗಾಟ ನಡೆಯುತ್ತಿತ್ತು. ಭಾರತ ಸರ್ಕಾರ ಅಥವಾ ಮೇಘಾಲಯ ಸರ್ಕಾರಕ್ಕೆ ಯಾವುದೇ ತೆರಿಗೆಯೂ ಪಾವತಿ ಆಗುತ್ತಿರಲಿಲ್ಲ. ಹೀಗೆ ಅಕ್ರಮವಾಗಿ ಬಂದಿರುವ ಅಡಿಕೆಯನ್ನು ದೇಶದ ವಿವಿಧ ಮಾರುಕಟ್ಟೆಗಳಿಗೆ ಮಾರಾಟ ಮಾಡಲಾಗುತ್ತದೆ ಮತ್ತು ಕೆಲವು ಕಂಪನಿಗಳು ಕಳ್ಳಸಾಗಣೆ ವಸ್ತುಗಳನ್ನು ಖರೀದಿಸುತ್ತಿತ್ತು. ಈ ಅಕ್ರಮ ಸಾಗಾಟಕ್ಕೆ ಮೇಘಾಲಯ ಸೇರಿದಂತೆ ದೇಶದ ಹಲವು ಕಡೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.

ಮೇಘಾಲಯ ಸರ್ಕಾರದ ಮಾಹಿತಿಯ ಪ್ರಕಾರ  ಪ್ರತಿದಿನ ರಾತ್ರಿಯಲ್ಲಿ ಸುಮಾರು 12 ಸಾವಿರ ಕೆಜಿ ಅಡಿಕೆಯನ್ನು ಯಾವುದೇ ತೆರಿಗೆಯನ್ನು ಪಾವತಿ ಮಾಡದೆ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಯು ಸ್ಥಳೀಯ ಅಡಿಕೆ ದರವನ್ನು ಕಡಿಮೆ ಮಾಡಿ ರೈತ ಸಮುದಾಯಕ್ಕೆ  ನಷ್ಟವನ್ನು ಉಂಟುಮಾಡಿತ್ತು. ಹೀಗಾಗಿ ಈಗ ಸರ್ಕಾರಗಳು ಎಚ್ಚೆತ್ತುಕೊಂಡಿದೆ.

ಇದಕ್ಕಾಗಿ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ಮಾಹಿತಿ ಪಡೆದು ಈಗ ಜಿಲ್ಲಾ ಆಡಳಿತವು ಕ್ರಮಕ್ಕೆ ಮುಂದಾಗಿದೆ. ರೈತರ ದೂರಿನ ಮೇರೆಗೆ ಡಿಸಿ ಮಿಥಾಲಿ ಅವರು  ಅಧಿಕಾರಿ ನಿಪೋನ್ ಹಜಾಂಗ್ ಅವರನ್ನು ತನಿಖೆಯ ಉಸ್ತುವಾರಿಗೆ ನೇಮಿಸಿದ್ದಾರೆ. ಶೀಘ್ರದಲ್ಲಿ ವರದಿಯನ್ನು ನೀಡಲಿದ್ದಾರೆ. ಈ ನಡುವೆ  ಜಿಲ್ಲಾಧಿಕಾರಿಯವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಅಸ್ಸಾಂ ಮತ್ತೆ ಅಡಿಕೆ ವಶಕ್ಕೆ : ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆಯನ್ನು ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಮತ್ತೆ ಪತ್ತೆ ಮಾಡಿದೆ.  ಮೂರು ಟ್ರಕ್‌ಗಳಲ್ಲಿ ಸುಮಾರು 3.168 ಕೋಟಿ ರೂಪಾಯಿಗಳ ಅಡಿಕೆಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

The Meghalaya government has now started an investigation into the case of illegal transportation of Arecanut from Bangladesh. Meghalayas North Garo Hills, Kumari Mithali Chandr District Collector Kumari Mithali Chandra has started an investigation following a complaint about illegal smuggling  of Arecanut from Bangladesh through the various borders of the Meghalaya state.

Source : IANS

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

2 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

4 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

5 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago