Advertisement
ಸಂಪಾದಕರ ಆಯ್ಕೆ

ಅಡಿಕೆ ಅಕ್ರಮ ಸಾಗಾಟ ಪ್ರಕರಣ | ತನಿಖೆ ಆರಂಭಿಸಿದ ಮೇಘಾಲಯ ಸರ್ಕಾರ |

Share

 ಬಾಂಗ್ಲಾದೇಶದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಕುರಿತು ಇದೀಗ ತನಿಖೆಗೆ ಮೇಘಾಲಯ ಸರ್ಕಾರ ಮುಂದಾಗಿದೆ. ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಮೇಘಾಲಯದ ಉತ್ತರ ಗರೋ ಹಿಲ್ಸ್‌ನ ಜಿಲ್ಲಾಧಿಕಾರಿ ಕುಮಾರಿ ಮಿಥಾಲಿ ಚಂದ್ರ ಅವರು ತನಿಖೆ ಆರಂಭಿಸಿದ್ದಾರೆ.

Advertisement
Advertisement

ಅಡಿಕೆಯಲ್ಲಿ ಬರ್ಮಾದಿಂದ ಬಾಂಗ್ಲಾದೇಶದ ಮೂಲಕ ವಿವಿಧ ಮಾರ್ಗದ ಮೂಲಕ ಭಾರತದೊಳಕ್ಕೆ ಸಾಗಿಸಲಾಗುತ್ತಿತ್ತು. ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳ ವಿವಿಧ ಪ್ರದೇಶಗಳ ಮೂಲಕ ಸಾಗಾಟವಾಗುತ್ತಿತ್ತು. ಇದೆಲ್ಲಾ ಅಂತಿಮವಾಗಿ ಅಸ್ಸಾಂನ ಮಟಿಯಾ ಪ್ರದೇಶದಲ್ಲಿ ದಾಸ್ತಾನುಗೊಂಡು ಬಳಿಕ ದೇಶದ ವಿವಿಧ ರಾಜ್ಯಗಳಿಗೆ, ವಿವಿಧ ಮಾರುಕಟ್ಟೆಗೆ ಸಾಗಾಟ ಮಾಡಲಾಗುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಈ ಸಾಗಾಟ ನಡೆಯುತ್ತಿತ್ತು. ಭಾರತ ಸರ್ಕಾರ ಅಥವಾ ಮೇಘಾಲಯ ಸರ್ಕಾರಕ್ಕೆ ಯಾವುದೇ ತೆರಿಗೆಯೂ ಪಾವತಿ ಆಗುತ್ತಿರಲಿಲ್ಲ. ಹೀಗೆ ಅಕ್ರಮವಾಗಿ ಬಂದಿರುವ ಅಡಿಕೆಯನ್ನು ದೇಶದ ವಿವಿಧ ಮಾರುಕಟ್ಟೆಗಳಿಗೆ ಮಾರಾಟ ಮಾಡಲಾಗುತ್ತದೆ ಮತ್ತು ಕೆಲವು ಕಂಪನಿಗಳು ಕಳ್ಳಸಾಗಣೆ ವಸ್ತುಗಳನ್ನು ಖರೀದಿಸುತ್ತಿತ್ತು. ಈ ಅಕ್ರಮ ಸಾಗಾಟಕ್ಕೆ ಮೇಘಾಲಯ ಸೇರಿದಂತೆ ದೇಶದ ಹಲವು ಕಡೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.

Advertisement

ಮೇಘಾಲಯ ಸರ್ಕಾರದ ಮಾಹಿತಿಯ ಪ್ರಕಾರ  ಪ್ರತಿದಿನ ರಾತ್ರಿಯಲ್ಲಿ ಸುಮಾರು 12 ಸಾವಿರ ಕೆಜಿ ಅಡಿಕೆಯನ್ನು ಯಾವುದೇ ತೆರಿಗೆಯನ್ನು ಪಾವತಿ ಮಾಡದೆ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಯು ಸ್ಥಳೀಯ ಅಡಿಕೆ ದರವನ್ನು ಕಡಿಮೆ ಮಾಡಿ ರೈತ ಸಮುದಾಯಕ್ಕೆ  ನಷ್ಟವನ್ನು ಉಂಟುಮಾಡಿತ್ತು. ಹೀಗಾಗಿ ಈಗ ಸರ್ಕಾರಗಳು ಎಚ್ಚೆತ್ತುಕೊಂಡಿದೆ.

ಇದಕ್ಕಾಗಿ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ಮಾಹಿತಿ ಪಡೆದು ಈಗ ಜಿಲ್ಲಾ ಆಡಳಿತವು ಕ್ರಮಕ್ಕೆ ಮುಂದಾಗಿದೆ. ರೈತರ ದೂರಿನ ಮೇರೆಗೆ ಡಿಸಿ ಮಿಥಾಲಿ ಅವರು  ಅಧಿಕಾರಿ ನಿಪೋನ್ ಹಜಾಂಗ್ ಅವರನ್ನು ತನಿಖೆಯ ಉಸ್ತುವಾರಿಗೆ ನೇಮಿಸಿದ್ದಾರೆ. ಶೀಘ್ರದಲ್ಲಿ ವರದಿಯನ್ನು ನೀಡಲಿದ್ದಾರೆ. ಈ ನಡುವೆ  ಜಿಲ್ಲಾಧಿಕಾರಿಯವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

Advertisement

ಅಸ್ಸಾಂ ಮತ್ತೆ ಅಡಿಕೆ ವಶಕ್ಕೆ : ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆಯನ್ನು ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಮತ್ತೆ ಪತ್ತೆ ಮಾಡಿದೆ.  ಮೂರು ಟ್ರಕ್‌ಗಳಲ್ಲಿ ಸುಮಾರು 3.168 ಕೋಟಿ ರೂಪಾಯಿಗಳ ಅಡಿಕೆಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

The Meghalaya government has now started an investigation into the case of illegal transportation of Arecanut from Bangladesh. Meghalayas North Garo Hills, Kumari Mithali Chandr District Collector Kumari Mithali Chandra has started an investigation following a complaint about illegal smuggling  of Arecanut from Bangladesh through the various borders of the Meghalaya state.

Advertisement

Source : IANS

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

6 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

7 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

7 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

7 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

10 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

15 hours ago