ಬಾಂಗ್ಲಾದೇಶದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಕುರಿತು ಇದೀಗ ತನಿಖೆಗೆ ಮೇಘಾಲಯ ಸರ್ಕಾರ ಮುಂದಾಗಿದೆ. ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಮೇಘಾಲಯದ ಉತ್ತರ ಗರೋ ಹಿಲ್ಸ್ನ ಜಿಲ್ಲಾಧಿಕಾರಿ ಕುಮಾರಿ ಮಿಥಾಲಿ ಚಂದ್ರ ಅವರು ತನಿಖೆ ಆರಂಭಿಸಿದ್ದಾರೆ.
ಅಡಿಕೆಯಲ್ಲಿ ಬರ್ಮಾದಿಂದ ಬಾಂಗ್ಲಾದೇಶದ ಮೂಲಕ ವಿವಿಧ ಮಾರ್ಗದ ಮೂಲಕ ಭಾರತದೊಳಕ್ಕೆ ಸಾಗಿಸಲಾಗುತ್ತಿತ್ತು. ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳ ವಿವಿಧ ಪ್ರದೇಶಗಳ ಮೂಲಕ ಸಾಗಾಟವಾಗುತ್ತಿತ್ತು. ಇದೆಲ್ಲಾ ಅಂತಿಮವಾಗಿ ಅಸ್ಸಾಂನ ಮಟಿಯಾ ಪ್ರದೇಶದಲ್ಲಿ ದಾಸ್ತಾನುಗೊಂಡು ಬಳಿಕ ದೇಶದ ವಿವಿಧ ರಾಜ್ಯಗಳಿಗೆ, ವಿವಿಧ ಮಾರುಕಟ್ಟೆಗೆ ಸಾಗಾಟ ಮಾಡಲಾಗುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಈ ಸಾಗಾಟ ನಡೆಯುತ್ತಿತ್ತು. ಭಾರತ ಸರ್ಕಾರ ಅಥವಾ ಮೇಘಾಲಯ ಸರ್ಕಾರಕ್ಕೆ ಯಾವುದೇ ತೆರಿಗೆಯೂ ಪಾವತಿ ಆಗುತ್ತಿರಲಿಲ್ಲ. ಹೀಗೆ ಅಕ್ರಮವಾಗಿ ಬಂದಿರುವ ಅಡಿಕೆಯನ್ನು ದೇಶದ ವಿವಿಧ ಮಾರುಕಟ್ಟೆಗಳಿಗೆ ಮಾರಾಟ ಮಾಡಲಾಗುತ್ತದೆ ಮತ್ತು ಕೆಲವು ಕಂಪನಿಗಳು ಕಳ್ಳಸಾಗಣೆ ವಸ್ತುಗಳನ್ನು ಖರೀದಿಸುತ್ತಿತ್ತು. ಈ ಅಕ್ರಮ ಸಾಗಾಟಕ್ಕೆ ಮೇಘಾಲಯ ಸೇರಿದಂತೆ ದೇಶದ ಹಲವು ಕಡೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಮೇಘಾಲಯ ಸರ್ಕಾರದ ಮಾಹಿತಿಯ ಪ್ರಕಾರ ಪ್ರತಿದಿನ ರಾತ್ರಿಯಲ್ಲಿ ಸುಮಾರು 12 ಸಾವಿರ ಕೆಜಿ ಅಡಿಕೆಯನ್ನು ಯಾವುದೇ ತೆರಿಗೆಯನ್ನು ಪಾವತಿ ಮಾಡದೆ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಯು ಸ್ಥಳೀಯ ಅಡಿಕೆ ದರವನ್ನು ಕಡಿಮೆ ಮಾಡಿ ರೈತ ಸಮುದಾಯಕ್ಕೆ ನಷ್ಟವನ್ನು ಉಂಟುಮಾಡಿತ್ತು. ಹೀಗಾಗಿ ಈಗ ಸರ್ಕಾರಗಳು ಎಚ್ಚೆತ್ತುಕೊಂಡಿದೆ.
ಇದಕ್ಕಾಗಿ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ಮಾಹಿತಿ ಪಡೆದು ಈಗ ಜಿಲ್ಲಾ ಆಡಳಿತವು ಕ್ರಮಕ್ಕೆ ಮುಂದಾಗಿದೆ. ರೈತರ ದೂರಿನ ಮೇರೆಗೆ ಡಿಸಿ ಮಿಥಾಲಿ ಅವರು ಅಧಿಕಾರಿ ನಿಪೋನ್ ಹಜಾಂಗ್ ಅವರನ್ನು ತನಿಖೆಯ ಉಸ್ತುವಾರಿಗೆ ನೇಮಿಸಿದ್ದಾರೆ. ಶೀಘ್ರದಲ್ಲಿ ವರದಿಯನ್ನು ನೀಡಲಿದ್ದಾರೆ. ಈ ನಡುವೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಅಸ್ಸಾಂ ಮತ್ತೆ ಅಡಿಕೆ ವಶಕ್ಕೆ : ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆಯನ್ನು ಪ್ರಕರಣವನ್ನು ಅಸ್ಸಾಂ ರೈಫಲ್ಸ್ ಮತ್ತೆ ಪತ್ತೆ ಮಾಡಿದೆ. ಮೂರು ಟ್ರಕ್ಗಳಲ್ಲಿ ಸುಮಾರು 3.168 ಕೋಟಿ ರೂಪಾಯಿಗಳ ಅಡಿಕೆಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.
The Meghalaya government has now started an investigation into the case of illegal transportation of Arecanut from Bangladesh. Meghalayas North Garo Hills, Kumari Mithali Chandr District Collector Kumari Mithali Chandra has started an investigation following a complaint about illegal smuggling of Arecanut from Bangladesh through the various borders of the Meghalaya state.
Source : IANS
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…