Advertisement
ಸಂಪಾದಕೀಯ ಆಯ್ಕೆ

ಅಡಿಕೆ ಅಕ್ರಮ ಸಾಗಾಟ ಪ್ರಕರಣ | ತನಿಖೆ ಆರಂಭಿಸಿದ ಮೇಘಾಲಯ ಸರ್ಕಾರ |

Share

 ಬಾಂಗ್ಲಾದೇಶದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಕುರಿತು ಇದೀಗ ತನಿಖೆಗೆ ಮೇಘಾಲಯ ಸರ್ಕಾರ ಮುಂದಾಗಿದೆ. ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಮೇಘಾಲಯದ ಉತ್ತರ ಗರೋ ಹಿಲ್ಸ್‌ನ ಜಿಲ್ಲಾಧಿಕಾರಿ ಕುಮಾರಿ ಮಿಥಾಲಿ ಚಂದ್ರ ಅವರು ತನಿಖೆ ಆರಂಭಿಸಿದ್ದಾರೆ.

ಅಡಿಕೆಯಲ್ಲಿ ಬರ್ಮಾದಿಂದ ಬಾಂಗ್ಲಾದೇಶದ ಮೂಲಕ ವಿವಿಧ ಮಾರ್ಗದ ಮೂಲಕ ಭಾರತದೊಳಕ್ಕೆ ಸಾಗಿಸಲಾಗುತ್ತಿತ್ತು. ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳ ವಿವಿಧ ಪ್ರದೇಶಗಳ ಮೂಲಕ ಸಾಗಾಟವಾಗುತ್ತಿತ್ತು. ಇದೆಲ್ಲಾ ಅಂತಿಮವಾಗಿ ಅಸ್ಸಾಂನ ಮಟಿಯಾ ಪ್ರದೇಶದಲ್ಲಿ ದಾಸ್ತಾನುಗೊಂಡು ಬಳಿಕ ದೇಶದ ವಿವಿಧ ರಾಜ್ಯಗಳಿಗೆ, ವಿವಿಧ ಮಾರುಕಟ್ಟೆಗೆ ಸಾಗಾಟ ಮಾಡಲಾಗುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಈ ಸಾಗಾಟ ನಡೆಯುತ್ತಿತ್ತು. ಭಾರತ ಸರ್ಕಾರ ಅಥವಾ ಮೇಘಾಲಯ ಸರ್ಕಾರಕ್ಕೆ ಯಾವುದೇ ತೆರಿಗೆಯೂ ಪಾವತಿ ಆಗುತ್ತಿರಲಿಲ್ಲ. ಹೀಗೆ ಅಕ್ರಮವಾಗಿ ಬಂದಿರುವ ಅಡಿಕೆಯನ್ನು ದೇಶದ ವಿವಿಧ ಮಾರುಕಟ್ಟೆಗಳಿಗೆ ಮಾರಾಟ ಮಾಡಲಾಗುತ್ತದೆ ಮತ್ತು ಕೆಲವು ಕಂಪನಿಗಳು ಕಳ್ಳಸಾಗಣೆ ವಸ್ತುಗಳನ್ನು ಖರೀದಿಸುತ್ತಿತ್ತು. ಈ ಅಕ್ರಮ ಸಾಗಾಟಕ್ಕೆ ಮೇಘಾಲಯ ಸೇರಿದಂತೆ ದೇಶದ ಹಲವು ಕಡೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.

ಮೇಘಾಲಯ ಸರ್ಕಾರದ ಮಾಹಿತಿಯ ಪ್ರಕಾರ  ಪ್ರತಿದಿನ ರಾತ್ರಿಯಲ್ಲಿ ಸುಮಾರು 12 ಸಾವಿರ ಕೆಜಿ ಅಡಿಕೆಯನ್ನು ಯಾವುದೇ ತೆರಿಗೆಯನ್ನು ಪಾವತಿ ಮಾಡದೆ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿತ್ತು. ಈ ಅಕ್ರಮ ದಂಧೆಯು ಸ್ಥಳೀಯ ಅಡಿಕೆ ದರವನ್ನು ಕಡಿಮೆ ಮಾಡಿ ರೈತ ಸಮುದಾಯಕ್ಕೆ  ನಷ್ಟವನ್ನು ಉಂಟುಮಾಡಿತ್ತು. ಹೀಗಾಗಿ ಈಗ ಸರ್ಕಾರಗಳು ಎಚ್ಚೆತ್ತುಕೊಂಡಿದೆ.

ಇದಕ್ಕಾಗಿ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ಮಾಹಿತಿ ಪಡೆದು ಈಗ ಜಿಲ್ಲಾ ಆಡಳಿತವು ಕ್ರಮಕ್ಕೆ ಮುಂದಾಗಿದೆ. ರೈತರ ದೂರಿನ ಮೇರೆಗೆ ಡಿಸಿ ಮಿಥಾಲಿ ಅವರು  ಅಧಿಕಾರಿ ನಿಪೋನ್ ಹಜಾಂಗ್ ಅವರನ್ನು ತನಿಖೆಯ ಉಸ್ತುವಾರಿಗೆ ನೇಮಿಸಿದ್ದಾರೆ. ಶೀಘ್ರದಲ್ಲಿ ವರದಿಯನ್ನು ನೀಡಲಿದ್ದಾರೆ. ಈ ನಡುವೆ  ಜಿಲ್ಲಾಧಿಕಾರಿಯವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಅಸ್ಸಾಂ ಮತ್ತೆ ಅಡಿಕೆ ವಶಕ್ಕೆ : ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆಯನ್ನು ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಮತ್ತೆ ಪತ್ತೆ ಮಾಡಿದೆ.  ಮೂರು ಟ್ರಕ್‌ಗಳಲ್ಲಿ ಸುಮಾರು 3.168 ಕೋಟಿ ರೂಪಾಯಿಗಳ ಅಡಿಕೆಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

The Meghalaya government has now started an investigation into the case of illegal transportation of Arecanut from Bangladesh. Meghalayas North Garo Hills, Kumari Mithali Chandr District Collector Kumari Mithali Chandra has started an investigation following a complaint about illegal smuggling  of Arecanut from Bangladesh through the various borders of the Meghalaya state.

Source : IANS

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago