ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ ಅಂತಾ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ದೂರು ದಾಖಲಾಗಿದೆ. ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ಮೈಸೂರು ಸಿಟಿ ಪೊಲೀಸ್ ಆಯುಕ್ತರಿಗೆ ಎನ್ಎಸ್ಯುಐ ದೂರು ನೀಡಿದೆ. ಚುನಾವಣಾ ಅಧಿಕಾರಿಗಳಿಗೂ ದೂರು ನೀಡಿ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ.
ಅಲ್ಲದೇ ಪ್ರಧಾನಿ ಮೋದಿ ಇಂದಿನಿಂದ (ಏಪ್ರಿಲ್ 29) ರಾಜ್ಯ ಪ್ರವಾಸ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ `ವಿಷ ಸರ್ಪ’ ಕಟು ಟೀಕೆಗೆ ಮೋದಿ ಕೌಂಟರ್ ಬಗ್ಗೆ ಕುತೂಹಲ ಮೂಡಿದೆ.
ಖರ್ಗೆಯವರ `ವಿಷ ಸರ್ಪ’ ಆರೋಪಕ್ಕೆ ಮೋದಿ ತಿರುಗೇಟು ಏನಿರಬಹುದೆಂದು ಚರ್ಚೆಯಾಗ್ತಿದೆ. ವಿವಾದ ಸೃಷ್ಟಿಸಿರುವ ಖರ್ಗೆ ಹೇಳಿಕೆಗೆ ಈಗಾಗಲೇ ಬಿಜೆಪಿಯಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಚುನಾವಣಾ ಆಯೋಗಕ್ಕೂ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಆರೋಪ ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್ ಪಾಳಯದಲ್ಲೂ ತಳಮಳ ಶರುವಾಗಿದೆ. ವಿವಾದ ಹಸಿ ಇರುವಾಗಲೇ ರಾಜ್ಯಕ್ಕೆ ಮೋದಿ ಎಂಟ್ರಿ ಕೊಡುತ್ತಿದ್ದು, ಖರ್ಗೆ ಟೀಕೆಗೆ ಕೌಂಟರ್ ಕೊಡ್ತಾರಾ? ಇದರಿಂದ ಚುನಾವಣಾ ಪಾಲಿಟಿಕ್ಸ್ಗೆ ಮತ್ತಷ್ಟು ಲಾಭವಾಗುತ್ತಾ ಅನ್ನೋ ಪ್ರಶ್ನೆ ಎದ್ದಿದೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…