ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ | ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ- ಡಿ. ವೀರೇಂದ್ರ ಹೆಗ್ಗಡೆ

September 18, 2023
7:01 PM
ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭ ನಡೆಯಿತು.

ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು  ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.

ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.

ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror