ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ | ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ- ಡಿ. ವೀರೇಂದ್ರ ಹೆಗ್ಗಡೆ

September 18, 2023
7:01 PM
ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭ ನಡೆಯಿತು.

ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

Advertisement
Advertisement
Advertisement
Advertisement

ಅವರು  ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.

Advertisement

ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.

Advertisement

ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror