ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.
ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.
ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…