Advertisement
ಸುದ್ದಿಗಳು

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ | ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ- ಡಿ. ವೀರೇಂದ್ರ ಹೆಗ್ಗಡೆ

Share

ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು  ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.

Advertisement

ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.

Advertisement

ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago