ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.
ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.
ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ವಂದಿಸಿದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…