Opinion

ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ

Share

ಜೋಡೆತ್ತು ಸಾಕಾಣಿಕೆ(Cattle) ಮಾಡುವ ರೈತರಿಂದ(Farmer) ಯಾವುದೇ ಜಾತಿಯಿಲ್ಲ(Caste) ಹಾಗೂ ಯಾವುದೇ ಧರ್ಮವೂ ಕೂಡ ಇಲ್ಲ. ಆದರೆ, ಇಂದು ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತು ಸಾಕಾಣಿಕೆದಾರರು ತಾವು ಹಾಕಿದ ಬಂಡವಾಳವನ್ನೂ ಕೂಡ ಮರಳಿ ಪಡೆಯದ ಸ್ಥಿತಿಯಲ್ಲಿದ್ದಾರೆ. ಈ ಕಾರಣಕ್ಕಾಗಿ, ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡಿದಾಗ, ಅನೇಕ ಎತ್ತುಗಳು ಕಾಸಾಯಿಖಾನೆಯ(Slaughterhouse) ಪಾಲಾಗುತ್ತಿವೆ. ಎತ್ತುಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿರುವ ಕಾರಣ, ಹೋರಿಕರುಗಳನ್ನು ಸಾಕಿ ಸಲುಹಲು ರೈತರಿಗೆ ಸಾಧ್ಯವಾಗುತ್ತಿಲ್ಲ.

Advertisement

ಇದರಿಂದ ಹೋರಿಕರುಗಳನ್ನು ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ, ಇಂದು ದಿನಾಲು ಲಕ್ಷಾಂತರ ಹೋರಿಕರುಗಳು ಕಾಸಾಯಿಖಾನೆಯ ಪಾಲಾಗುತ್ತಿವೆ. ನಮ್ಮ ಕಣ್ಣು ಮುಂದೆ ಓಡಾಡುವ ಜೀವಂತ ಬಾಲ ನಂದಿಗಳನ್ನು ಕಾಸಾಯಿಖಾನೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡು, ನಾವು ದೇವಸ್ಥಾನಗಳಲ್ಲಿರುವ ನಂದಿಗಳನ್ನು ಪೂಜಿಸಿದರೆ, ದೇವಸ್ಥಾನಗಳಲ್ಲಿರುವ ಯಾವ ನಂದಿಯೂ ಕೂಡ ಮುಂದೆ ನಮ್ಮ ಮಕ್ಕಳು ನರಕಯಾತನೆಯನ್ನು ಅನುಭವಿಸುವುದನ್ನು ತಪ್ಪಿಸಲಾರ. ಈ ಕಟು ಸತ್ಯದ ದರ್ಶನವು ಸಮಸ್ಯೆ ಕೈ ಮೀರಿ ಹೋಗುವ ಮುಂಚೆ ಸಮಾಜಕ್ಕೆ ಆಗಲೇಬೇಕಾಗಿದೆ.

ಗ್ರಾಮಗಳಲ್ಲಿ ಅನ್ನ ಸಂಪತ್ತು ಉಳಿಯಬೇಕಾದರೆ ನಂದಿ ಸಂಪತ್ತನ್ನು ಉಳಿಸಿಕೊಳ್ಳಲೇಬೇಕಾಗಿದೆ. ನಮ್ಮ ಗ್ರಾಮಗಳಲ್ಲಿರುವ ಹಿರಿಯ ರೈತರೊಂದಿಗೆ ಹಾಗೂ ಜೋಡೆತ್ತು ಸಾಕಾಣಿಕೆ ಮಾಡುವ ರೈತರೊಂದಿಗೆ ಈ ವಿಷಯದ ಕುರಿತು ಚರ್ಚಿಸಿದಾಗ ಜೋಡೆತ್ತುಗಳ ಮಹತ್ವದ ಕುರಿತು ನಮಗೆ ಖಂಡಿತ ಅರಿವಾಗುತ್ತದೆ. ಈ ಕಾರಣಕ್ಕಾಗಿ, ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತುಗಳನ್ನು ಹೊಂದಿದ ರೈತರನ್ನು ಒಗ್ಗೂಡಿಸಿ ಜೋಡೆತ್ತುಗಳನ್ನು ಉಳಿಸಲು ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಮೊದಲ‌ ಹಂತದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ “ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ” ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ.‌ ಹಾಗಾಗಿ, ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯದಲ್ಲಿ ಕೈ ಜೋಡಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ‌ ಮಾಹಿತಿ ಪಡೆಯಲು 8884390598 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: missionsavesoil.com, 9110885321, Abhishek

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

30 minutes ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

47 minutes ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

60 minutes ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

1 hour ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

1 hour ago

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…

2 hours ago