ಜೋಡೆತ್ತು ಸಾಕಾಣಿಕೆ(Cattle) ಮಾಡುವ ರೈತರಿಂದ(Farmer) ಯಾವುದೇ ಜಾತಿಯಿಲ್ಲ(Caste) ಹಾಗೂ ಯಾವುದೇ ಧರ್ಮವೂ ಕೂಡ ಇಲ್ಲ. ಆದರೆ, ಇಂದು ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತು ಸಾಕಾಣಿಕೆದಾರರು ತಾವು ಹಾಕಿದ ಬಂಡವಾಳವನ್ನೂ ಕೂಡ ಮರಳಿ ಪಡೆಯದ ಸ್ಥಿತಿಯಲ್ಲಿದ್ದಾರೆ. ಈ ಕಾರಣಕ್ಕಾಗಿ, ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡಿದಾಗ, ಅನೇಕ ಎತ್ತುಗಳು ಕಾಸಾಯಿಖಾನೆಯ(Slaughterhouse) ಪಾಲಾಗುತ್ತಿವೆ. ಎತ್ತುಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿರುವ ಕಾರಣ, ಹೋರಿಕರುಗಳನ್ನು ಸಾಕಿ ಸಲುಹಲು ರೈತರಿಗೆ ಸಾಧ್ಯವಾಗುತ್ತಿಲ್ಲ.
ಇದರಿಂದ ಹೋರಿಕರುಗಳನ್ನು ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ, ಇಂದು ದಿನಾಲು ಲಕ್ಷಾಂತರ ಹೋರಿಕರುಗಳು ಕಾಸಾಯಿಖಾನೆಯ ಪಾಲಾಗುತ್ತಿವೆ. ನಮ್ಮ ಕಣ್ಣು ಮುಂದೆ ಓಡಾಡುವ ಜೀವಂತ ಬಾಲ ನಂದಿಗಳನ್ನು ಕಾಸಾಯಿಖಾನೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡು, ನಾವು ದೇವಸ್ಥಾನಗಳಲ್ಲಿರುವ ನಂದಿಗಳನ್ನು ಪೂಜಿಸಿದರೆ, ದೇವಸ್ಥಾನಗಳಲ್ಲಿರುವ ಯಾವ ನಂದಿಯೂ ಕೂಡ ಮುಂದೆ ನಮ್ಮ ಮಕ್ಕಳು ನರಕಯಾತನೆಯನ್ನು ಅನುಭವಿಸುವುದನ್ನು ತಪ್ಪಿಸಲಾರ. ಈ ಕಟು ಸತ್ಯದ ದರ್ಶನವು ಸಮಸ್ಯೆ ಕೈ ಮೀರಿ ಹೋಗುವ ಮುಂಚೆ ಸಮಾಜಕ್ಕೆ ಆಗಲೇಬೇಕಾಗಿದೆ.
ಗ್ರಾಮಗಳಲ್ಲಿ ಅನ್ನ ಸಂಪತ್ತು ಉಳಿಯಬೇಕಾದರೆ ನಂದಿ ಸಂಪತ್ತನ್ನು ಉಳಿಸಿಕೊಳ್ಳಲೇಬೇಕಾಗಿದೆ. ನಮ್ಮ ಗ್ರಾಮಗಳಲ್ಲಿರುವ ಹಿರಿಯ ರೈತರೊಂದಿಗೆ ಹಾಗೂ ಜೋಡೆತ್ತು ಸಾಕಾಣಿಕೆ ಮಾಡುವ ರೈತರೊಂದಿಗೆ ಈ ವಿಷಯದ ಕುರಿತು ಚರ್ಚಿಸಿದಾಗ ಜೋಡೆತ್ತುಗಳ ಮಹತ್ವದ ಕುರಿತು ನಮಗೆ ಖಂಡಿತ ಅರಿವಾಗುತ್ತದೆ. ಈ ಕಾರಣಕ್ಕಾಗಿ, ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತುಗಳನ್ನು ಹೊಂದಿದ ರೈತರನ್ನು ಒಗ್ಗೂಡಿಸಿ ಜೋಡೆತ್ತುಗಳನ್ನು ಉಳಿಸಲು ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.
ಮೊದಲ ಹಂತದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ “ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ” ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ. ಹಾಗಾಗಿ, ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯದಲ್ಲಿ ಕೈ ಜೋಡಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ ಮಾಹಿತಿ ಪಡೆಯಲು 8884390598 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: missionsavesoil.com, 9110885321, Abhishek
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…