Advertisement
Opinion

ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ

Share

ಜೋಡೆತ್ತು ಸಾಕಾಣಿಕೆ(Cattle) ಮಾಡುವ ರೈತರಿಂದ(Farmer) ಯಾವುದೇ ಜಾತಿಯಿಲ್ಲ(Caste) ಹಾಗೂ ಯಾವುದೇ ಧರ್ಮವೂ ಕೂಡ ಇಲ್ಲ. ಆದರೆ, ಇಂದು ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತು ಸಾಕಾಣಿಕೆದಾರರು ತಾವು ಹಾಕಿದ ಬಂಡವಾಳವನ್ನೂ ಕೂಡ ಮರಳಿ ಪಡೆಯದ ಸ್ಥಿತಿಯಲ್ಲಿದ್ದಾರೆ. ಈ ಕಾರಣಕ್ಕಾಗಿ, ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡಿದಾಗ, ಅನೇಕ ಎತ್ತುಗಳು ಕಾಸಾಯಿಖಾನೆಯ(Slaughterhouse) ಪಾಲಾಗುತ್ತಿವೆ. ಎತ್ತುಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿರುವ ಕಾರಣ, ಹೋರಿಕರುಗಳನ್ನು ಸಾಕಿ ಸಲುಹಲು ರೈತರಿಗೆ ಸಾಧ್ಯವಾಗುತ್ತಿಲ್ಲ.

ಇದರಿಂದ ಹೋರಿಕರುಗಳನ್ನು ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ, ಇಂದು ದಿನಾಲು ಲಕ್ಷಾಂತರ ಹೋರಿಕರುಗಳು ಕಾಸಾಯಿಖಾನೆಯ ಪಾಲಾಗುತ್ತಿವೆ. ನಮ್ಮ ಕಣ್ಣು ಮುಂದೆ ಓಡಾಡುವ ಜೀವಂತ ಬಾಲ ನಂದಿಗಳನ್ನು ಕಾಸಾಯಿಖಾನೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡು, ನಾವು ದೇವಸ್ಥಾನಗಳಲ್ಲಿರುವ ನಂದಿಗಳನ್ನು ಪೂಜಿಸಿದರೆ, ದೇವಸ್ಥಾನಗಳಲ್ಲಿರುವ ಯಾವ ನಂದಿಯೂ ಕೂಡ ಮುಂದೆ ನಮ್ಮ ಮಕ್ಕಳು ನರಕಯಾತನೆಯನ್ನು ಅನುಭವಿಸುವುದನ್ನು ತಪ್ಪಿಸಲಾರ. ಈ ಕಟು ಸತ್ಯದ ದರ್ಶನವು ಸಮಸ್ಯೆ ಕೈ ಮೀರಿ ಹೋಗುವ ಮುಂಚೆ ಸಮಾಜಕ್ಕೆ ಆಗಲೇಬೇಕಾಗಿದೆ.

ಗ್ರಾಮಗಳಲ್ಲಿ ಅನ್ನ ಸಂಪತ್ತು ಉಳಿಯಬೇಕಾದರೆ ನಂದಿ ಸಂಪತ್ತನ್ನು ಉಳಿಸಿಕೊಳ್ಳಲೇಬೇಕಾಗಿದೆ. ನಮ್ಮ ಗ್ರಾಮಗಳಲ್ಲಿರುವ ಹಿರಿಯ ರೈತರೊಂದಿಗೆ ಹಾಗೂ ಜೋಡೆತ್ತು ಸಾಕಾಣಿಕೆ ಮಾಡುವ ರೈತರೊಂದಿಗೆ ಈ ವಿಷಯದ ಕುರಿತು ಚರ್ಚಿಸಿದಾಗ ಜೋಡೆತ್ತುಗಳ ಮಹತ್ವದ ಕುರಿತು ನಮಗೆ ಖಂಡಿತ ಅರಿವಾಗುತ್ತದೆ. ಈ ಕಾರಣಕ್ಕಾಗಿ, ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತುಗಳನ್ನು ಹೊಂದಿದ ರೈತರನ್ನು ಒಗ್ಗೂಡಿಸಿ ಜೋಡೆತ್ತುಗಳನ್ನು ಉಳಿಸಲು ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಮೊದಲ‌ ಹಂತದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ “ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ” ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ.‌ ಹಾಗಾಗಿ, ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯದಲ್ಲಿ ಕೈ ಜೋಡಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ‌ ಮಾಹಿತಿ ಪಡೆಯಲು 8884390598 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: missionsavesoil.com, 9110885321, Abhishek

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

20 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago