Advertisement
Opinion

ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ

Share

ಜೋಡೆತ್ತು ಸಾಕಾಣಿಕೆ(Cattle) ಮಾಡುವ ರೈತರಿಂದ(Farmer) ಯಾವುದೇ ಜಾತಿಯಿಲ್ಲ(Caste) ಹಾಗೂ ಯಾವುದೇ ಧರ್ಮವೂ ಕೂಡ ಇಲ್ಲ. ಆದರೆ, ಇಂದು ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತು ಸಾಕಾಣಿಕೆದಾರರು ತಾವು ಹಾಕಿದ ಬಂಡವಾಳವನ್ನೂ ಕೂಡ ಮರಳಿ ಪಡೆಯದ ಸ್ಥಿತಿಯಲ್ಲಿದ್ದಾರೆ. ಈ ಕಾರಣಕ್ಕಾಗಿ, ರೈತರು ಅನಿವಾರ್ಯವಾಗಿ ಎತ್ತುಗಳನ್ನು ಮಾರಾಟ ಮಾಡಿದಾಗ, ಅನೇಕ ಎತ್ತುಗಳು ಕಾಸಾಯಿಖಾನೆಯ(Slaughterhouse) ಪಾಲಾಗುತ್ತಿವೆ. ಎತ್ತುಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆ ಕಡಿಮೆಯಾಗುತ್ತಿರುವ ಕಾರಣ, ಹೋರಿಕರುಗಳನ್ನು ಸಾಕಿ ಸಲುಹಲು ರೈತರಿಗೆ ಸಾಧ್ಯವಾಗುತ್ತಿಲ್ಲ.

ಇದರಿಂದ ಹೋರಿಕರುಗಳನ್ನು ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ, ಇಂದು ದಿನಾಲು ಲಕ್ಷಾಂತರ ಹೋರಿಕರುಗಳು ಕಾಸಾಯಿಖಾನೆಯ ಪಾಲಾಗುತ್ತಿವೆ. ನಮ್ಮ ಕಣ್ಣು ಮುಂದೆ ಓಡಾಡುವ ಜೀವಂತ ಬಾಲ ನಂದಿಗಳನ್ನು ಕಾಸಾಯಿಖಾನೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡು, ನಾವು ದೇವಸ್ಥಾನಗಳಲ್ಲಿರುವ ನಂದಿಗಳನ್ನು ಪೂಜಿಸಿದರೆ, ದೇವಸ್ಥಾನಗಳಲ್ಲಿರುವ ಯಾವ ನಂದಿಯೂ ಕೂಡ ಮುಂದೆ ನಮ್ಮ ಮಕ್ಕಳು ನರಕಯಾತನೆಯನ್ನು ಅನುಭವಿಸುವುದನ್ನು ತಪ್ಪಿಸಲಾರ. ಈ ಕಟು ಸತ್ಯದ ದರ್ಶನವು ಸಮಸ್ಯೆ ಕೈ ಮೀರಿ ಹೋಗುವ ಮುಂಚೆ ಸಮಾಜಕ್ಕೆ ಆಗಲೇಬೇಕಾಗಿದೆ.

ಗ್ರಾಮಗಳಲ್ಲಿ ಅನ್ನ ಸಂಪತ್ತು ಉಳಿಯಬೇಕಾದರೆ ನಂದಿ ಸಂಪತ್ತನ್ನು ಉಳಿಸಿಕೊಳ್ಳಲೇಬೇಕಾಗಿದೆ. ನಮ್ಮ ಗ್ರಾಮಗಳಲ್ಲಿರುವ ಹಿರಿಯ ರೈತರೊಂದಿಗೆ ಹಾಗೂ ಜೋಡೆತ್ತು ಸಾಕಾಣಿಕೆ ಮಾಡುವ ರೈತರೊಂದಿಗೆ ಈ ವಿಷಯದ ಕುರಿತು ಚರ್ಚಿಸಿದಾಗ ಜೋಡೆತ್ತುಗಳ ಮಹತ್ವದ ಕುರಿತು ನಮಗೆ ಖಂಡಿತ ಅರಿವಾಗುತ್ತದೆ. ಈ ಕಾರಣಕ್ಕಾಗಿ, ಪ್ರತಿಯೊಂದು ಜಾತಿ ಹಾಗೂ ಧರ್ಮದಲ್ಲಿರುವ ಜೋಡೆತ್ತುಗಳನ್ನು ಹೊಂದಿದ ರೈತರನ್ನು ಒಗ್ಗೂಡಿಸಿ ಜೋಡೆತ್ತುಗಳನ್ನು ಉಳಿಸಲು ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಮೊದಲ‌ ಹಂತದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ “ಜೋಡೆತ್ತು ಸಾಕಾಣಿಕೆದಾರರ ಸರ್ವ ಜಾತಿ ಹಾಗೂ ಸರ್ವ ಧರ್ಮ ಸಮ್ಮೇಳನ” ಆಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ.‌ ಹಾಗಾಗಿ, ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯದಲ್ಲಿ ಕೈ ಜೋಡಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ‌ ಮಾಹಿತಿ ಪಡೆಯಲು 8884390598 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: missionsavesoil.com, 9110885321, Abhishek

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

8 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

17 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

18 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

22 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago