ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ರೀಲಿಸ್ ಮಾಡಿದ್ದು, ಅಳೆದು ತೂಗಿ 43 ಮಂದಿಯ ಲಿಸ್ಟ್ ಅನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದ್ದೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡಿಲ್ಲ. ವರಣಾದಲ್ಲಿ ಮಾತ್ರ ಅವರು ಸ್ಪರ್ಧೆ ಮಾಡಲಿದ್ದಾರೆ. ಅಥಣಿ ಕ್ಷೇತ್ರದಿಂದ ನಿನ್ನೆಯಷ್ಟೆ ಕಾಂಗ್ರೆಸ್ ಸೇರಿದ್ದ ಸವದಿ ಮೊದಲ ಯತ್ನದಲ್ಲಿಯೇ ಟಿಕೆಟ್ ಪಡೆದುಕೊಂಡಿದ್ದಾರೆ. ಕೋಲಾರದಿಂದ ಕೊತ್ತೂರು ಮಂಜುನಾಥಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ತೆರೆದಾಳದಿಂದ ಉಮಾಶ್ರೀಗೆ ಈ ಬಾರಿ ಟಿಕೆಟ್ ನೀಡಿಲ್ಲ.
ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ದಕ್ಷಿಣಕ್ಕೆ ಮಾಜಿ ಶಾಸಕ ಲೋಬೊ ಕೊನೆಗೆ ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಇನ್ನೂ ಈಚೆಗೆ ಬಿಜೆಪಿ ಬಿಟ್ಟು ಕೈ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಅಶೋಕ್ ಕುಮಾರ್ ರೈ ಪುತ್ತೂರು ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಗಳೂರು ಉತ್ತರಕ್ಕೆ ಮೂರನೇ ಪಟ್ಟಿಯಲ್ಲಿಯೂ ಹೆಸರು ಘೋಷಣೆ ಮಾಡಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಬಾವಾ ನಡುವೆ ತೀವ್ರ ಫೈಟ್ ಇದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರಕ್ಕೆ ತೀವ್ರ ವಿರೋಧದ ನಡುವೆ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಗೆ ಪಕ್ಷ ಮಣೆ ಹಾಕಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…