Advertisement
ಸುದ್ದಿಗಳು

ಕಾಂಗ್ರೆಸ್ 3 ನೇ ಪಟ್ಟಿ ರೀಲಿಸ್: ದಕ್ಷಿಣಕ್ಕೆ ಲೋಬೊ, ಪುತ್ತೂರಿಗೆ ರೈ, ಮಂಗಳೂರು ಉತ್ತರ ಮತ್ತೆ ಬಾಕಿ

Share

ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ರೀಲಿಸ್ ಮಾಡಿದ್ದು, ಅಳೆದು ತೂಗಿ 43 ಮಂದಿಯ ಲಿಸ್ಟ್ ಅನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದ್ದೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡಿಲ್ಲ. ವರಣಾದಲ್ಲಿ ಮಾತ್ರ ಅವರು ಸ್ಪರ್ಧೆ ಮಾಡಲಿದ್ದಾರೆ. ಅಥಣಿ ಕ್ಷೇತ್ರದಿಂದ ನಿನ್ನೆಯಷ್ಟೆ ಕಾಂಗ್ರೆಸ್ ಸೇರಿದ್ದ ಸವದಿ ಮೊದಲ ಯತ್ನದಲ್ಲಿಯೇ ಟಿಕೆಟ್ ಪಡೆದುಕೊಂಡಿದ್ದಾರೆ. ಕೋಲಾರದಿಂದ ಕೊತ್ತೂರು ಮಂಜುನಾಥಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ತೆರೆದಾಳದಿಂದ ಉಮಾಶ್ರೀಗೆ ಈ ಬಾರಿ ಟಿಕೆಟ್ ನೀಡಿಲ್ಲ.

ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ದಕ್ಷಿಣಕ್ಕೆ ಮಾಜಿ ಶಾಸಕ ಲೋಬೊ ಕೊನೆಗೆ ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಇನ್ನೂ ಈಚೆಗೆ ಬಿಜೆಪಿ ಬಿಟ್ಟು ಕೈ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಅಶೋಕ್ ಕುಮಾರ್ ರೈ ಪುತ್ತೂರು ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಗಳೂರು ಉತ್ತರಕ್ಕೆ ಮೂರನೇ ಪಟ್ಟಿಯಲ್ಲಿಯೂ ಹೆಸರು ಘೋಷಣೆ ಮಾಡಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಬಾವಾ ನಡುವೆ ತೀವ್ರ ಫೈಟ್ ಇದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರಕ್ಕೆ ತೀವ್ರ ವಿರೋಧದ ನಡುವೆ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಗೆ ಪಕ್ಷ ಮಣೆ ಹಾಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

30 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

57 minutes ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

16 hours ago