Advertisement
ಸುದ್ದಿಗಳು

ಕಾಂಗ್ರೆಸ್ 3 ನೇ ಪಟ್ಟಿ ರೀಲಿಸ್: ದಕ್ಷಿಣಕ್ಕೆ ಲೋಬೊ, ಪುತ್ತೂರಿಗೆ ರೈ, ಮಂಗಳೂರು ಉತ್ತರ ಮತ್ತೆ ಬಾಕಿ

Share

ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ 3 ನೇ ಪಟ್ಟಿಯನ್ನು ರೀಲಿಸ್ ಮಾಡಿದ್ದು, ಅಳೆದು ತೂಗಿ 43 ಮಂದಿಯ ಲಿಸ್ಟ್ ಅನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದ್ದೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡಿಲ್ಲ. ವರಣಾದಲ್ಲಿ ಮಾತ್ರ ಅವರು ಸ್ಪರ್ಧೆ ಮಾಡಲಿದ್ದಾರೆ. ಅಥಣಿ ಕ್ಷೇತ್ರದಿಂದ ನಿನ್ನೆಯಷ್ಟೆ ಕಾಂಗ್ರೆಸ್ ಸೇರಿದ್ದ ಸವದಿ ಮೊದಲ ಯತ್ನದಲ್ಲಿಯೇ ಟಿಕೆಟ್ ಪಡೆದುಕೊಂಡಿದ್ದಾರೆ. ಕೋಲಾರದಿಂದ ಕೊತ್ತೂರು ಮಂಜುನಾಥಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ತೆರೆದಾಳದಿಂದ ಉಮಾಶ್ರೀಗೆ ಈ ಬಾರಿ ಟಿಕೆಟ್ ನೀಡಿಲ್ಲ.

ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ದಕ್ಷಿಣಕ್ಕೆ ಮಾಜಿ ಶಾಸಕ ಲೋಬೊ ಕೊನೆಗೆ ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಇನ್ನೂ ಈಚೆಗೆ ಬಿಜೆಪಿ ಬಿಟ್ಟು ಕೈ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಅಶೋಕ್ ಕುಮಾರ್ ರೈ ಪುತ್ತೂರು ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಗಳೂರು ಉತ್ತರಕ್ಕೆ ಮೂರನೇ ಪಟ್ಟಿಯಲ್ಲಿಯೂ ಹೆಸರು ಘೋಷಣೆ ಮಾಡಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಬಾವಾ ನಡುವೆ ತೀವ್ರ ಫೈಟ್ ಇದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರಕ್ಕೆ ತೀವ್ರ ವಿರೋಧದ ನಡುವೆ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಗೆ ಪಕ್ಷ ಮಣೆ ಹಾಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

19 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago