#BharatJodoYatra | ಕರ್ನಾಟಕ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ | ಮೊದಲ ದಿನವೇ ಬಿಜೆಪಿ ವಿರುದ್ಧ ಗುಡುಗಿದ ಸಿದ್ಧರಾಮಯ್ಯ |

September 30, 2022
7:40 PM

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶ ಮಾಡಿದೆ. 21 ದಿನಗಳ ಕಾಲ ಈ ಯಾತ್ರೆ ರಾಜ್ಯದಾದ್ಯಂತ 511 ಕಿಲೋ ಮೀಟರ್‌ ಸಂಚರಿಸಲಿರುವ ಈ ಯಾತ್ರೆಗೆ ಅದ್ದೂರಿ ಸ್ವಾಗತ ದೊರೆತಿದೆ.

ಮೊದಲ ದಿನ ಬೆಂಗಳೂರು ದಕ್ಷಿಣ, ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ನಾಯಕರು, ಕಾರ್ಯಕರ್ತರು  ಭಾಗಿಯಾಗಿದ್ದಾರೆ. 21 ದಿನಗಳ ಯಾತ್ರೆಯ ಬಳಿಕ ರಾಯಚೂರು ಮೂಲಕ ಭಾರತ್ ಜೋಡೋ ಯಾತ್ರೆ ಮುಂದಿನ ರಾಜ್ಯಕ್ಕೆ ತೆರಳಲಿದೆ.

ಸುಳ್ಯ-ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು

ಶುಕ್ರವಾರ ರಾಜ್ಯ ಪ್ರವೇಶಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು  ಹೇಳಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನು ಇಬ್ಭಾಗ ಮಾಡುವುದೇ ಇವರ ಉದ್ದೇಶ. ಸಂವಿಧಾನ ಉಳಿಸುವ ಕೆಲಸಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು.

ಭಾರತ್‌ ಜೋಡೋ ಯಾತ್ರೆಯ ಆರಂಭದಲ್ಲಿಯೇ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕದ ಗಡಿ ಕೆಕ್ಕನಹಳ್ಳಿ ಬಳಿಯ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಜಮಾಯಿಸಿದ್ದರು. ಮೀಸಲು ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದು, ಕಾರಿನಲ್ಲಿ ಮಾತ್ರ ಸಂಚರಿಸಲು ಅನುಮತಿ ನೀಡಿತ್ತು. ಆದರೆ ಸಿದ್ದರಾಮಯ್ಯ ತಮ್ಮ ವಾಹನ ನಿಲ್ಲಿಸಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದು, ಮಾಜಿ ಸಚಿವರು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಮಹದೇವಪ್ಪ, ಕೆ.ಜೆ. ಜಾರ್ಜ್ ಮತ್ತು ಇತರರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror