Advertisement
ಸುದ್ದಿಗಳು

#BharatJodoYatra | ಕರ್ನಾಟಕ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ | ಮೊದಲ ದಿನವೇ ಬಿಜೆಪಿ ವಿರುದ್ಧ ಗುಡುಗಿದ ಸಿದ್ಧರಾಮಯ್ಯ |

Share

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶ ಮಾಡಿದೆ. 21 ದಿನಗಳ ಕಾಲ ಈ ಯಾತ್ರೆ ರಾಜ್ಯದಾದ್ಯಂತ 511 ಕಿಲೋ ಮೀಟರ್‌ ಸಂಚರಿಸಲಿರುವ ಈ ಯಾತ್ರೆಗೆ ಅದ್ದೂರಿ ಸ್ವಾಗತ ದೊರೆತಿದೆ.

ಮೊದಲ ದಿನ ಬೆಂಗಳೂರು ದಕ್ಷಿಣ, ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ನಾಯಕರು, ಕಾರ್ಯಕರ್ತರು  ಭಾಗಿಯಾಗಿದ್ದಾರೆ. 21 ದಿನಗಳ ಯಾತ್ರೆಯ ಬಳಿಕ ರಾಯಚೂರು ಮೂಲಕ ಭಾರತ್ ಜೋಡೋ ಯಾತ್ರೆ ಮುಂದಿನ ರಾಜ್ಯಕ್ಕೆ ತೆರಳಲಿದೆ.

ಸುಳ್ಯ-ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು

ಶುಕ್ರವಾರ ರಾಜ್ಯ ಪ್ರವೇಶಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.ಗುಂಡ್ಲುಪೇಟೆಯಲ್ಲಿ ನಡೆದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು  ಹೇಳಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನು ಇಬ್ಭಾಗ ಮಾಡುವುದೇ ಇವರ ಉದ್ದೇಶ. ಸಂವಿಧಾನ ಉಳಿಸುವ ಕೆಲಸಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು.

ಭಾರತ್‌ ಜೋಡೋ ಯಾತ್ರೆಯ ಆರಂಭದಲ್ಲಿಯೇ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕದ ಗಡಿ ಕೆಕ್ಕನಹಳ್ಳಿ ಬಳಿಯ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಜಮಾಯಿಸಿದ್ದರು. ಮೀಸಲು ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದು, ಕಾರಿನಲ್ಲಿ ಮಾತ್ರ ಸಂಚರಿಸಲು ಅನುಮತಿ ನೀಡಿತ್ತು. ಆದರೆ ಸಿದ್ದರಾಮಯ್ಯ ತಮ್ಮ ವಾಹನ ನಿಲ್ಲಿಸಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದು, ಮಾಜಿ ಸಚಿವರು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಮಹದೇವಪ್ಪ, ಕೆ.ಜೆ. ಜಾರ್ಜ್ ಮತ್ತು ಇತರರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

11 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

17 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

18 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

18 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

18 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

18 hours ago