ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಹೇಳಿದ್ದಾರೆ.
ದ ರೂರಲ್ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್ ಹೇಳಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…