ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಹಳದಿ ಎಲೆರೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಹೇಳಿದ್ದಾರೆ.
ದ ರೂರಲ್ ಮಿರರ್.ಕಾಂ ನಡೆಸಿದ ಪುಟ್ಟ ಸಂದರ್ಶನದಲ್ಲಿ ಮಾತನಾಡಿದ ಪದ್ಮರಾಜ್, ಅಡಿಕೆ ಬೆಳೆಗಾರರು ಹಾಗೂ ಕೃಷಿಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಸುಳ್ಯದಲ್ಲಿ ಅಡಿಕೆ ಹಳದಿ ಎಲೆರೋಗ ಇದೆ, ಎಲ್ಲಾ ಕಡೆ ಎಲೆಚುಕ್ಕಿ ರೋಗ ಇದೆ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗಮನಿಸಿದ್ದೇನೆ. ಈ ಸಮಸ್ಯೆಗಳಿಗೆ ಸರ್ಕಾರವು ಈ ಮೊದಲೇ ಸ್ಪಂದಿಸಬೇಕಿತ್ತು. ಸರ್ಕಾರದ ಮೂಲಕ ತಜ್ಞರ ಸಮಿತಿಗಳನ್ನು ರಚಿಸಿಕೊಂಡು, ಪ್ರಯೋಗಾಲಯಕ್ಕೆ ಬೇಕಾದ ಅಗತ್ಯವಾದ ನೆರವುಗಳನ್ನು ನೀಡುವುದು ಹಾಗೂ ಕೃಷಿಕರಿಗೆ ತಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಪೂರೈಸಲು ಪ್ರಯತ್ನ ಪಡುತ್ತೇನೆ ಎಂದು ಪದ್ಮರಾಜ್ ಹೇಳಿದರು. ಇದರ ಜೊತೆಗೆ ಮಾರುಕಟ್ಟೆ ಕಡೆಗೂ ಗಮನ ಹರಿಸಲಾಗುವುದು ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಕೂಡಾ ಅಗತ್ಯವಾಗಿದೆ. ಗ್ರಾಮೀಣ ಭಾಗದ ಹಲವು ಮೂಲಭೂತ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕಿದೆ. ಇದಕ್ಕಾಗಿ ಆದ್ಯತೆಯಲ್ಲಿ ಪ್ರಯತ್ನಪಡಲಾಗುವುದು ಎಂದು ಪದ್ಮರಾಜ್ ಹೇಳಿದರು.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…