ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…