ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು. ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…