ಸುದ್ದಿಗಳು

ಮೊಟ್ಟೆಯಲ್ಲೂ ಮಕ್ಕಳಿಗೆ ಮೋಸ ಮಾಡಿದ ಬಿಜೆಪಿ – ಪ್ರಿಯಾಂಕಾ ಗಾಂಧಿ ಕಿಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್  ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

Advertisement

ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಇಂದಿನ ಸಮಾರಂಭಗಳಲ್ಲಿ ಪ್ರಧಾನಿ ಮೋದಿ  ಕಾಂಗ್ರಸ್ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ರೆ, ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರವನ್ನೇ ಪ್ರಯೋಗಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು ಎಲ್ಲವೂ ಇದೆ. ಇಲ್ಲಿನ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ವಿಶ್ವದಲ್ಲೇ ಬೆಂಗಳೂರು ಸುಪ್ರಸಿದ್ಧವಾಗಿದೆ, ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಗರ್ವವಾಗುತ್ತೆ. ಆದ್ರೆ ಕರ್ನಾಟಕದಲ್ಲಿರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

Advertisement

ಹೆಚ್ಚು ಹಣ ಸಂಪಾದಿಸಬೇಕೆಂದು ಆಸೆ ಇಟ್ಟುಕೊಂಡಿದ್ದ ಸರ್ಕಾರ ಕಳೆದ ಮೂರು ವರ್ಷಗಳ ಹಿಂದೆ ಶಾಸಕರನ್ನ ಖರೀದಿಸಿ ಅಧಿಕಾರಕ್ಕೆ ಬಂತು. ಆರಂಭದಲ್ಲೇ ನಿಯತ್ತಾಗಿರಲಿಲ್ಲ. ಎಲ್ಲರದಲ್ಲೂ ಮೋಸ ಮಾಡಿದ ಸರ್ಕಾರ ಅದು. ಕೊನೆಗೆ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಡಲಿಲ್ಲ. ಇಡೀ ದೇಶಕ್ಕೆ ಗೊತ್ತು ಇದು 40 ಪರ್ಸೆಂಟ್ ಸರ್ಕಾರ. ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿದ್ರು, ಜಿಎಸ್‌ಟಿ ತಂದರು. ಸರ್ಕಾರಿ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡಿದ್ರು, ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನ ಲೂಟಿ ಮಾಡಿದೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಲೂಟಿ ಮಾಡಿದ 1.5 ಲಕ್ಷ ಕೋಟಿ ಇದ್ದಿದ್ದರೆ, ಆ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಆಗುತ್ತಿತ್ತು. 2,250 ಕಿಮೀ 6 ಪಥದ ಎಕ್ಸ್ಪ್ರೆಸ್ ವೇ ಆಗುತ್ತಿತ್ತು. 100ಕ್ಕೂ ಹೆಚ್ಚು ಇಎಸ್‌ಐ ಆಸ್ಪತ್ರೆ ನಿರ್ಮಿಸಬಹುದಿತ್ತು. 30 ಸಾವಿರ ಸ್ಮಾರ್ಟ್‌ಕ್ಲಾಸ್‌ ನಿರ್ಮಾಣ ಮಾಡಬಹುದಿತ್ತು. ಇವರು ಲೂಟಿ ಮಾಡಿದ ಹಣದಿಂದ 30 ಲಕ್ಷ ಮನೆ ನಿರ್ಮಿಸಬಹುದಿತ್ತು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

6 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

13 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

14 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

23 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

24 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

24 hours ago