Advertisement
ಸುದ್ದಿಗಳು

ಮೊಟ್ಟೆಯಲ್ಲೂ ಮಕ್ಕಳಿಗೆ ಮೋಸ ಮಾಡಿದ ಬಿಜೆಪಿ – ಪ್ರಿಯಾಂಕಾ ಗಾಂಧಿ ಕಿಡಿ

Share

ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್  ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಇಂದಿನ ಸಮಾರಂಭಗಳಲ್ಲಿ ಪ್ರಧಾನಿ ಮೋದಿ  ಕಾಂಗ್ರಸ್ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ರೆ, ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರವನ್ನೇ ಪ್ರಯೋಗಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು ಎಲ್ಲವೂ ಇದೆ. ಇಲ್ಲಿನ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ವಿಶ್ವದಲ್ಲೇ ಬೆಂಗಳೂರು ಸುಪ್ರಸಿದ್ಧವಾಗಿದೆ, ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಗರ್ವವಾಗುತ್ತೆ. ಆದ್ರೆ ಕರ್ನಾಟಕದಲ್ಲಿರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಹೆಚ್ಚು ಹಣ ಸಂಪಾದಿಸಬೇಕೆಂದು ಆಸೆ ಇಟ್ಟುಕೊಂಡಿದ್ದ ಸರ್ಕಾರ ಕಳೆದ ಮೂರು ವರ್ಷಗಳ ಹಿಂದೆ ಶಾಸಕರನ್ನ ಖರೀದಿಸಿ ಅಧಿಕಾರಕ್ಕೆ ಬಂತು. ಆರಂಭದಲ್ಲೇ ನಿಯತ್ತಾಗಿರಲಿಲ್ಲ. ಎಲ್ಲರದಲ್ಲೂ ಮೋಸ ಮಾಡಿದ ಸರ್ಕಾರ ಅದು. ಕೊನೆಗೆ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಡಲಿಲ್ಲ. ಇಡೀ ದೇಶಕ್ಕೆ ಗೊತ್ತು ಇದು 40 ಪರ್ಸೆಂಟ್ ಸರ್ಕಾರ. ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿದ್ರು, ಜಿಎಸ್‌ಟಿ ತಂದರು. ಸರ್ಕಾರಿ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡಿದ್ರು, ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನ ಲೂಟಿ ಮಾಡಿದೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಲೂಟಿ ಮಾಡಿದ 1.5 ಲಕ್ಷ ಕೋಟಿ ಇದ್ದಿದ್ದರೆ, ಆ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಆಗುತ್ತಿತ್ತು. 2,250 ಕಿಮೀ 6 ಪಥದ ಎಕ್ಸ್ಪ್ರೆಸ್ ವೇ ಆಗುತ್ತಿತ್ತು. 100ಕ್ಕೂ ಹೆಚ್ಚು ಇಎಸ್‌ಐ ಆಸ್ಪತ್ರೆ ನಿರ್ಮಿಸಬಹುದಿತ್ತು. 30 ಸಾವಿರ ಸ್ಮಾರ್ಟ್‌ಕ್ಲಾಸ್‌ ನಿರ್ಮಾಣ ಮಾಡಬಹುದಿತ್ತು. ಇವರು ಲೂಟಿ ಮಾಡಿದ ಹಣದಿಂದ 30 ಲಕ್ಷ ಮನೆ ನಿರ್ಮಿಸಬಹುದಿತ್ತು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

1 hour ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

2 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

2 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

2 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

18 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

18 hours ago