Advertisement
ಸುದ್ದಿಗಳು

ಮೊಟ್ಟೆಯಲ್ಲೂ ಮಕ್ಕಳಿಗೆ ಮೋಸ ಮಾಡಿದ ಬಿಜೆಪಿ – ಪ್ರಿಯಾಂಕಾ ಗಾಂಧಿ ಕಿಡಿ

Share

ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್  ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಇಂದಿನ ಸಮಾರಂಭಗಳಲ್ಲಿ ಪ್ರಧಾನಿ ಮೋದಿ  ಕಾಂಗ್ರಸ್ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ರೆ, ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರವನ್ನೇ ಪ್ರಯೋಗಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು ಎಲ್ಲವೂ ಇದೆ. ಇಲ್ಲಿನ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ವಿಶ್ವದಲ್ಲೇ ಬೆಂಗಳೂರು ಸುಪ್ರಸಿದ್ಧವಾಗಿದೆ, ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಗರ್ವವಾಗುತ್ತೆ. ಆದ್ರೆ ಕರ್ನಾಟಕದಲ್ಲಿರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಹೆಚ್ಚು ಹಣ ಸಂಪಾದಿಸಬೇಕೆಂದು ಆಸೆ ಇಟ್ಟುಕೊಂಡಿದ್ದ ಸರ್ಕಾರ ಕಳೆದ ಮೂರು ವರ್ಷಗಳ ಹಿಂದೆ ಶಾಸಕರನ್ನ ಖರೀದಿಸಿ ಅಧಿಕಾರಕ್ಕೆ ಬಂತು. ಆರಂಭದಲ್ಲೇ ನಿಯತ್ತಾಗಿರಲಿಲ್ಲ. ಎಲ್ಲರದಲ್ಲೂ ಮೋಸ ಮಾಡಿದ ಸರ್ಕಾರ ಅದು. ಕೊನೆಗೆ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಡಲಿಲ್ಲ. ಇಡೀ ದೇಶಕ್ಕೆ ಗೊತ್ತು ಇದು 40 ಪರ್ಸೆಂಟ್ ಸರ್ಕಾರ. ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿದ್ರು, ಜಿಎಸ್‌ಟಿ ತಂದರು. ಸರ್ಕಾರಿ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡಿದ್ರು, ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನ ಲೂಟಿ ಮಾಡಿದೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಲೂಟಿ ಮಾಡಿದ 1.5 ಲಕ್ಷ ಕೋಟಿ ಇದ್ದಿದ್ದರೆ, ಆ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಆಗುತ್ತಿತ್ತು. 2,250 ಕಿಮೀ 6 ಪಥದ ಎಕ್ಸ್ಪ್ರೆಸ್ ವೇ ಆಗುತ್ತಿತ್ತು. 100ಕ್ಕೂ ಹೆಚ್ಚು ಇಎಸ್‌ಐ ಆಸ್ಪತ್ರೆ ನಿರ್ಮಿಸಬಹುದಿತ್ತು. 30 ಸಾವಿರ ಸ್ಮಾರ್ಟ್‌ಕ್ಲಾಸ್‌ ನಿರ್ಮಾಣ ಮಾಡಬಹುದಿತ್ತು. ಇವರು ಲೂಟಿ ಮಾಡಿದ ಹಣದಿಂದ 30 ಲಕ್ಷ ಮನೆ ನಿರ್ಮಿಸಬಹುದಿತ್ತು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

15 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

19 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago