Advertisement
ಸುದ್ದಿಗಳು

ಮೊಟ್ಟೆಯಲ್ಲೂ ಮಕ್ಕಳಿಗೆ ಮೋಸ ಮಾಡಿದ ಬಿಜೆಪಿ – ಪ್ರಿಯಾಂಕಾ ಗಾಂಧಿ ಕಿಡಿ

Share

ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್  ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಇಂದಿನ ಸಮಾರಂಭಗಳಲ್ಲಿ ಪ್ರಧಾನಿ ಮೋದಿ  ಕಾಂಗ್ರಸ್ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ರೆ, ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರವನ್ನೇ ಪ್ರಯೋಗಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು ಎಲ್ಲವೂ ಇದೆ. ಇಲ್ಲಿನ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ವಿಶ್ವದಲ್ಲೇ ಬೆಂಗಳೂರು ಸುಪ್ರಸಿದ್ಧವಾಗಿದೆ, ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಗರ್ವವಾಗುತ್ತೆ. ಆದ್ರೆ ಕರ್ನಾಟಕದಲ್ಲಿರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಹೆಚ್ಚು ಹಣ ಸಂಪಾದಿಸಬೇಕೆಂದು ಆಸೆ ಇಟ್ಟುಕೊಂಡಿದ್ದ ಸರ್ಕಾರ ಕಳೆದ ಮೂರು ವರ್ಷಗಳ ಹಿಂದೆ ಶಾಸಕರನ್ನ ಖರೀದಿಸಿ ಅಧಿಕಾರಕ್ಕೆ ಬಂತು. ಆರಂಭದಲ್ಲೇ ನಿಯತ್ತಾಗಿರಲಿಲ್ಲ. ಎಲ್ಲರದಲ್ಲೂ ಮೋಸ ಮಾಡಿದ ಸರ್ಕಾರ ಅದು. ಕೊನೆಗೆ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಡಲಿಲ್ಲ. ಇಡೀ ದೇಶಕ್ಕೆ ಗೊತ್ತು ಇದು 40 ಪರ್ಸೆಂಟ್ ಸರ್ಕಾರ. ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿದ್ರು, ಜಿಎಸ್‌ಟಿ ತಂದರು. ಸರ್ಕಾರಿ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡಿದ್ರು, ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನ ಲೂಟಿ ಮಾಡಿದೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಲೂಟಿ ಮಾಡಿದ 1.5 ಲಕ್ಷ ಕೋಟಿ ಇದ್ದಿದ್ದರೆ, ಆ ಹಣದಲ್ಲಿ 100 ಏಮ್ಸ್ ಆಸ್ಪತ್ರೆ ನಿರ್ಮಾಣ ಆಗುತ್ತಿತ್ತು. 2,250 ಕಿಮೀ 6 ಪಥದ ಎಕ್ಸ್ಪ್ರೆಸ್ ವೇ ಆಗುತ್ತಿತ್ತು. 100ಕ್ಕೂ ಹೆಚ್ಚು ಇಎಸ್‌ಐ ಆಸ್ಪತ್ರೆ ನಿರ್ಮಿಸಬಹುದಿತ್ತು. 30 ಸಾವಿರ ಸ್ಮಾರ್ಟ್‌ಕ್ಲಾಸ್‌ ನಿರ್ಮಾಣ ಮಾಡಬಹುದಿತ್ತು. ಇವರು ಲೂಟಿ ಮಾಡಿದ ಹಣದಿಂದ 30 ಲಕ್ಷ ಮನೆ ನಿರ್ಮಿಸಬಹುದಿತ್ತು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

19 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago