Advertisement
Political mirror

ಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮೈಮರೆಯಬಾರದು | ಪ್ರಶಾಂತ್ ಕಿಶೋರ್ ಎಚ್ಚರಿಕೆ

Share

ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ಗೆ  ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ, ಗೆದ್ದ ಖುಷಿಯಲ್ಲಿ  ಮೈಮರೆತರೆ ಮುಂದೆ ಸಂಕಷ್ಟ ಇದೆ ಎಂದಿದ್ದಾರೆ.

ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮಾತನಾಡಿ, ”ಕರ್ನಾಟಕದ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎನ್ನುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ, ಕರ್ನಾಟಕ ವಿಧಾನಸಭೆ ಗೆದ್ದ ಖುಷಿಯಲ್ಲಿ ಬೀಗಬೇಡಿ” ಎಂದು ಎಚ್ಚರಿಸಿದ್ದಾರೆ.

ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, ”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದಿಸುತ್ತೇನೆ. ಆದರೆ, ಇದನ್ನು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಬಾರದು. ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೈಮರೆಯಬಾರದು” ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

”2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಡಿಮೆ ಸ್ಥಾನ ಗಳಿಸಿತು. ಅಲ್ಲದೇ, 2019ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆದ್ದರೂ, ಕೆಲವೇ ತಿಂಗಳುಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ನೆಲಕಚ್ಚಿತು ಎಂಬುದನ್ನು ಮರೆಯಬಾರದು” ಎಂದು ಪ್ರಶಾಂತ್ ಕಿಶೋರ್ ನೆನಪಿಸಿದ್ದಾರೆ. 2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. ಬಳಿಕ ಎರಡು ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಉತ್ತರಪ್ರದೇಶದ 80 ಸ್ಥಾನಗಳಲ್ಲಿ 73 ಸ್ಥಾನ ಬಾಚಿಕೊಂಡಿತು” ಎಂದು ತಿಳಿಸಿದರು.

ಪ್ರಶಾಂತ್ ಕಿಶೋರ್ ಅವರು 2012ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ನಂತರ ಪ್ರಸಿದ್ಧಿಯಾಗಿದ್ದರು. ಆ ಬಳಿಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿದ್ದರು.

ಈ ವೇಳೆ ಬಿಜೆಪಿ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಬೇಡಿಕೆ ಹೆಚ್ಚಾಯಿತು. ಬಿಜೆಪಿ ವಾರ್ ರೂಂನಿಂದ ಹೊರಬಂದ ಅವರು, ನಂತರ ಬಿಹಾರದಲ್ಲಿ ನಿತೀಶ್ ಕುಮಾರ್, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್, ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್, ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿದ್ದರು.

2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಗಾರಿಕೆಗೆ ವಿದಾಯ ಹೇಳಿದ್ದರು. ಆ ಬಳಿಕ ದೇಶಾದ್ಯಂತ ನೆಲಕಚ್ಚಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಮರುಜೀವ ನೀಡಲು ಪ್ರಯತ್ನಪಟ್ಟರು. ಆದರೆ, ಪಕ್ಷದಲ್ಲಿ ಅವರ ಮಾತಿಗೆ ಮನ್ನಣೆ ಸಿಗದ ಕಾರಣ, ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ಆರಂಭಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

11 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

22 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

23 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago