ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಕ್ಷೇತ್ರ ಆಯ್ಕೆಯ ಗೊಂದಲಕ್ಕೆ ತೆರೆ ಬಿದ್ದಿದೆ.
ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ನಾಳೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಜನರು ನೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹೈಕಮಾಂಡ್ ಈ ಅವಕಾಶ ನೀಡಿದೆ. ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಬೇಸರವಾಗುವುದು ಸಹಜ. ಇದನ್ನು ಸಮಾಧಾನಪಡಿಸಿ ಬಗೆಹರಿಸಲು ನಾಯಕರಿದ್ದಾರೆ. ಎಲ್ಲರೂ ಮಾತನಾಡಿ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುತ್ತೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…