Advertisement
MIRROR FOCUS

ಕಾಂಗ್ರೆಸ್ ಪಟ್ಟಿ ರಿಲೀಸ್| ವರುಣಾದಿಂದ ಸಿದ್ದರಾಮಯ್ಯ, ಮಂಗಳೂರು ಉತ್ತರ, ದಕ್ಷಿಣ ಇನ್ನೂ ಸಸ್ಪೆನ್ಸ್ | ಸುಳ್ಯದಲ್ಲಿ ಅಸಮಾಧಾನದ ಅಲೆ | ಮಾತುಕತೆಯ ಮೂಲಕ ಬಗೆಹರಿಸುತ್ತೇವೆ ಎಂದ ಜಿ ಕೃಷ್ಣಪ್ಪ

Share

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಕ್ಷೇತ್ರ ಆಯ್ಕೆಯ ಗೊಂದಲಕ್ಕೆ ತೆರೆ ಬಿದ್ದಿದೆ.

ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಂಗಳೂರಿನಿಂದ ಯು.ಟಿ. ಖಾದರ್, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ ಮೀಸಲು ಕ್ಷೇತ್ರದಿಂದ ಕೃಷ್ಣಪ್ಪ ಜಿ, ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ್ ಸೈಲ್, ಭಟ್ಕಳದಿಂದ ಮಂಕಾಳ ವೈದ್ಯ, ಹಳಿಯಾಳದಿಂದ ದೇಶಪಾಂಡೆ ಸ್ಪರ್ಧೆ ಮಾಡಲಿದ್ದಾರೆ, ಇನ್ನೂ ಉಡುಪಿ ಜಿಲ್ಲೆಯ ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರದಿಂದ ದಿನೇಶ್ ಹೆಗ್ಡೆ, ಕಾಪುದಿಂದ ಸೊರಕೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಇನ್ನೂ ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.

ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ನಾಳೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಜನರು ನೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹೈಕಮಾಂಡ್‌ ಈ ಅವಕಾಶ ನೀಡಿದೆ. ಟಿಕೆಟ್‌ ಘೋಷಣೆಯಾದ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಬೇಸರವಾಗುವುದು ಸಹಜ. ಇದನ್ನು ಸಮಾಧಾನಪಡಿಸಿ ಬಗೆಹರಿಸಲು ನಾಯಕರಿದ್ದಾರೆ. ಎಲ್ಲರೂ ಮಾತನಾಡಿ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುತ್ತೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

11 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago