Advertisement
Uncategorized

ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಣಾಳಿಕೆ : ಪ್ರಸ್ತಾಪ ವಾಪಸ್ ಸಾಧ್ಯತೆ

Share

 

ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

8 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

24 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago