ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…