Advertisement
Uncategorized

ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಣಾಳಿಕೆ : ಪ್ರಸ್ತಾಪ ವಾಪಸ್ ಸಾಧ್ಯತೆ

Share

 

ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

5 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

13 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

13 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago