Advertisement
Uncategorized

ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಣಾಳಿಕೆ : ಪ್ರಸ್ತಾಪ ವಾಪಸ್ ಸಾಧ್ಯತೆ

Share

 

ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

10 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

18 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

19 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

20 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago