Advertisement
ಸುದ್ದಿಗಳು

ಜನರ ದುಡ್ಡಲ್ಲಿ ಬಿಜೆಪಿ ಪ್ರಚಾರ | ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್‌ ಧ್ವನಿ |

Share

ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಹೆಸರಿನಲ್ಲಿ ರೈತರ, ಜನರ ಹಣದಲ್ಲಿ ಬಿಜೆಪಿ ಪ್ರಚಾರ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಮುಖಂಡರು, ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೂಲಕ ಮೂಲ ಆಶಯದ ವಿರುದ್ಧವಾಗಿ ವರ್ತಿಸಿದೆ, ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನಾಗಿಸಿದೆ, ಜನರ, ರೈತರ ಹಣದಲ್ಲಿ ಸಭೆ ನಡೆಸಿ ಪಕ್ಷದ ಪ್ರಚಾರ ಸಭೆಯನ್ನಾಗಿಸಿದೆ ಎಂದು  ಆರೋಪಿಸಿದೆ. ಕ್ಯಾಂಪ್ಕೋ ತಾನು ಬೆಳೆದು ಬಂದ ಹಾದಿ, ಎದುರಿಸುತ್ತಿರುವ ಸವಾಲುಗಳು, ಸರ್ಕಾರದಿಂದ ಸಿಗಬೇಕಾದ ಸವಲತ್ತು, ಪರಿಹಾರಗಳ ಬಗ್ಗೆ ಗಮನ ಸೆಳೆಯಲು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದರೇ  ಅಥವಾ ಬಿಜೆಪಿ ಪ್ರಚಾರ  ಕಾರ್ಯಕ್ರಮ ಮಾಡಿ ರೈತರಿಗೆ ಹಾಗೂ ಸಂಘದ ಸದಸ್ಯರಿಗೆ ಅನ್ಯಾಯ ಮಾಡಿದರೇ ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ‌ ಮಾತನಾಡಿ, ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಅವರು ಮಾತನಾಡದೆ, ರಾಜಕೀಯ ಭಾಷಣ ಮಾಡಿರುವುದು  ಸರಿಯಲ್ಲ, ಅದೂ ರೈತರ ಹಣದಲ್ಲಿ, ಜನರ ಹಣದಲ್ಲಿ ಮಾಡಿರುವ ಸಮಾವೇಶದಲ್ಲಿ ರಾಜಕೀಯವನ್ನೂ ಎಳೆದು ತರಲಾಗಿದೆ.ಕ್ಯಾಂಪ್ಕೋದಲ್ಲಿ  ಒಂದೇ ಪಕ್ಷದ ಸದಸ್ಯರು ಅಲ್ಲ, ಎಲ್ಲಾ ಪಕ್ಷದ ಸದಸ್ಯರೂ ಇದ್ದಾರೆ. ಈ ಪಕ್ಷಾತೀತ ಸಹಕಾರಿ ಸಂಘದ ವೇದಿಕೆಯಲ್ಲಿ ಚುನಾವಣಾ ಭಾಷಣ ಮಾಡಲು ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ ಕಾಂಗ್ರೆಸ್‌ ಕ್ಯಾಂಪ್ಕೋ ಸ್ಥಾಪಕ ವಾರಾಣಾಸಿ ಸುಬ್ರಾಯ ಭಟ್ ಅವರು ಮೊನ್ನೆ ವೇದಿಕೆಯಲ್ಲಿರುತ್ತಿದ್ದರೆ ಅಮಿತ್ ಶಾ ಅವರನ್ನು ಗೆಟ್ ಔಟ್ ಎನ್ನುತ್ತಿದ್ದರು. ಆದರೇ ಬಿಜೆಪಿಯ ಚಮಚಾ ಹಾಗೂ ಚೇಲಾಗಳಂತೆ ವರ್ತಿಸುವ ಈಗಿನ ಬಹುತೇಕ ನಿರ್ದೇಶಕರು ಅಡಳಿತ ಮಂಡಳಿಯ ಸದಸ್ಯರು ವೇದಿಕೆಯ ದುರುಪಯೋಗಕ್ಕೆ ಮೂಕ ಸಾಕ್ಷಿಯಾದರು ಎಂದರು.

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸವಾಲುಗಳು ಹಾಗೂ ಅದಕ್ಕೆ ಸರಕಾರ ಒದಗಿಸಲಿರುವ ಪರಿಹಾರ ಕ್ರಮಗಳ ಬಗ್ಗೆ ಮಾತನಾಡದ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಅವರು  ಪುತ್ತೂರು ಭೇಟಿ ಬಂದ ಪುಟ್ಟ ಹೋದ ಪುಟ್ಟ ಎಂಬಂತಾಗಿದೆಯೆಂದು ಗೇಲಿ ಮಾಡಿದರು. ಅಡಿಕೆ ಬೆಳೆಗೆ ಪ್ರಯೋಜನಕಾರಿಯಾಗುವ ಯಾವುದೇ ಮಾತುಗಳನ್ನು ಆಡಿಲ್ಲ. ಗುಜರಾತ್ ಹಾಗೂ ಅಡಿಕೆಗಿರುವ ನಂಟಿಗಷ್ಟೆ ಅಡಿಕೆಯ ಉಲ್ಲೇಖ ಮಾಡಿದರು.  ಅಡಿಕೆ ಆಮದು, ಎಲೆ ಚುಕ್ಕಿ ಹಾಗೂ ಹಳದಿ ರೋಗದಿಂದ ಸಂಕಷ್ಟ ಪಡುತ್ತಿರುವ ರೈತನಿಗೆ ಯಾವುದೇ ಯೋಜನೆ, ಪರಿಹಾರ ಘೋಷಿಸಿಲ್ಲ ಎಂದರು.ಅಮಿತ್ ಶಾ ಅವರ ಮಗ ಅಡಿಕೆ ಅಮದು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ . ಹೀಗಾಗಿಯೇ ಶಾ ರವರು ಅಡಿಕೆಯ ಕನಿಷ್ಟ ಅಮದು ಬೆಳೆಯನ್ನು ಹೆಚ್ಚಿಸುವ ಬಗ್ಗೆ ತುಟಿಪಿಟಕ್ ಎಂದಿಲ್ಲ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮೌನೀಸ್ ಮಸ್ಕರೆಂಜಸ್, ರವೀಂದ್ರ ರೈ ನೆಕ್ಕಿಲು ಮತ್ತು ಸಿದ್ದಿಕ್ ಸುಲ್ತಾನ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

8 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

8 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

8 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

8 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

8 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

16 hours ago