Advertisement
MIRROR FOCUS

ಕೃಷಿ ಬೆಳೆಗಳ ದೇಸಿ ತಳಿಗಳ ಸಂರಕ್ಷಣೆ | ಕೆ-ಕಿಸಾನ್ ಆ್ಯಪ್‍ನಲ್ಲಿ ದೇಸಿ ತಳಿ ನೋಂದಣಿಗೆ ಸೂಚನೆ

Share

ಕಣ್ಮರೆಯಾಗುತ್ತಿರುವ ಕೃಷಿ ಬೆಳೆಗಳ ದೇಸಿ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ರಾಜ್ಯ ಸರಕಾರ ಕೈಗೆತ್ತಿಕೊಂಡಿರುವ ʻʻದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ” ದಕ್ಷಿಣ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ.

ಈಗಾಗಲೇ ದೇಸಿ ತಳಿಗಳ ನೋಂದಣಿಗೆ ಕೆ-ಕಿಸಾನ್ ಆ್ಯಪ್ ಬಿಡುಗಡೆಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತ ಬೆಳೆಗೆ ಸಂಬಂಧಿಸಿದಂತೆ ಒಟ್ಟು 6 ರೈತರ (ಮಂಗಳೂರು-2, ಬಂಟ್ವಾಳ-1, ಮುಲ್ಕಿ-1, ಬೆಳ್ತಂಗಡಿ-2) 268 ತಳಿಗಳು ನೋಂದಣಿಯಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಾಂಪ್ರದಾಯಿಕ ತಳಿಗಳನ್ನು ನೋಂದಣಿ ಮಾಡಿಕೊಳ್ಳಬೇಕು.

ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಬಿತ್ತನೆ ಬೀಜ ಬ್ಯಾಂಕ್‍ನಲ್ಲಿ ಇರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ದರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಹಾಗೂ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು. ಈ ಎಲ್ಲಾ ಅಂಶಗಳನ್ನು ಅನುಸರಿಸಿ ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ತಮ್ಮ ವಿವರಗಳನ್ನು ನೋಂದಾಯಿಸಬೇಕು.

ತಳಿ ಸಂರಕ್ಷಣೆ ಉದ್ದೇಶ : ಕಣ್ಮರೆಯಾಗುತ್ತಿರುವ ತಳಿಗಳನ್ನು ಒಳಗೊಂಡಂತೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಗುರುತಿಸಿದ ದೇಸಿ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡುವುದು, ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವುದು.

ಸಾಂಪ್ರದಾಯಿಕ, ಪರಂಪರೆಯ ಜಾನಪದ ಪ್ರಭೇದಗಳು ವಿಶಿಷ್ಟ ಗುಣಲಕ್ಷಣ ಮತ್ತು ಆರೋಗ್ಯವರ್ಧಿತ ತಳಿಗಳಾಗಿರುತ್ತದೆ. ವಿಶಿಷ್ಟ ಗುಣಲಕ್ಷಣ ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಭೇದಗಳಿಂದ ದೇಸಿ ತಳಿಗಳು  ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಆದರೆ ಕೆಲವೇ ರೈತರು ಈ ದೇಸಿ ತಳಿ ಕೃಷಿ ಮಾಡುವುದನ್ನು  ಮುಂದುವರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೃಷಿ ಇಲಾಖೆ, ಈ ಉತ್ತೇಜನ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಿದೆ.

ಆಯ್ಕೆಯಾದ ಬೆಳೆಗಳು:  ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂಡೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳನ್ನು ನೋಂದಣಿ ಮಾಡಬಹುದು.

ದೇಸಿ ತಳಿಗಳನ್ನು ಗುರುತಿಸುವ ಗುಣಲಕ್ಷಣಗಳು: ರೈತರು ತಲೆಮಾರುಗಳಿಂದ ಬೆಳೆದ ಸಾಂಪ್ರದಾಯಿಕ ಪ್ರಭೇದಗಳು, ಸ್ಥಳೀಯ ಕೃಷಿ ಪದ್ದತಿ ಮತ್ತು ಪ್ರದೇಶಕ್ಕೆ ಹೊಂದಿಕೊಂಡಿರುವ ತಳಿಗಳಾಗಿವೆ. ಇವು ಅಧಿಸೂಚಿತಗೊಂಡ ತಳಿಗಳಾಗಿರಬಹುದು. ವಿಶಿಷ್ಟ ಗುಣ ಲಕ್ಷಣಗಳನ್ನು ಹೊಂದಿರುತ್ತವೆ. ಪ್ರೊಟೆಕ್ಷನ್ ಆಫ್ ಪ್ಲಾಂಟ್ ವೆರೈಟೀಸ್ ಮತ್ತು ಫಾರ್ಮರ್‍ಸ್ ರೈಟ್ ಆಥಾರಿಟಿಯಲ್ಲಿ ನೋಂದಾಯಿಸಿಕೊಂಡಿರಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago