ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.
ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…
ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.
ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…