Advertisement
Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

Advertisement
Advertisement

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

8 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

15 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

22 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

22 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

22 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

23 hours ago