Advertisement
Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

5 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago