Advertisement
MIRROR FOCUS

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

Share

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ ಹೆದ್ದಾರಿಗಳ ಸುತ್ತಲೂ 25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ.  1 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೌಲ್ಯದ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ  ಹೇಳಿದರು.

ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಆರ್ಥಿಕತೆ ಏರುಗತಿಯಲ್ಲಿ ಸಾಗಿದೆ. ಕಳೆದ 11 ವರ್ಷಗಳಲ್ಲಿ, ಭಾರತ ವಿಶ್ವ ಗುರು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಮತ್ತು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ದೇಶವಾಗುವತ್ತ ದಾಪುಗಾಲು ಇಟ್ಟಿದೆ, ಅರ್ಥ ವ್ಯವಸ್ಥೆಯ ಸುಧಾರಣೆಗಾಗಿ ಈಗಾಗಲೇ ಹಲವು ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ ಎಂದು  ಹೇಳಿದರು. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಏಷ್ಯಾ, ಇಂಡೋನೇಷ್ಯಾ, ಮಲೇಷ್ಯಾ, ಚೀನಾ, ಸಿಂಗಪುರ, ಜಪಾನ್‌ನಿಂದ ಜನರು ಭಗವಾನ್ ಗೌತಮ ಬುದ್ಧನ ಜನ್ಮಸ್ಥಳಕ್ಕೆ ಬರುವ ಕಾರಣದಿಂದ 22 ಸಾವಿರ ಕೋಟಿ ರೂಪಾಯಿಗಳಲ್ಲಿ  ಬುದ್ಧ ಸರ್ಕ್ಯೂಟ್ ನಿರ್ಮಾಣ ಮಾಡಲಾಗಿದೆ ಎಂದರು. ಚಾರ್ ಧಾಮ್‌, ಬದರಿನಾಥ್‌, ಕೇದಾರನಾಥ್, ಗಂಗೋತ್ರಿ, ಯಮುನೋತ್ರಿ ಸ್ಥಳಗಳಿಗೆ ಬರುವವರ ಸಂಖ್ಯೆ  ಮೂರು ಪಟ್ಟು ಹೆಚ್ಚಾಗಿದೆ. ಕೇದಾರನಾಥಕ್ಕೆ ರೋಪ್‌ವೇ ಮಾಡಲಾಗುತ್ತಿದೆ.  ಕೈಲಾಸ ಮಾನಸರೋವರವನ್ನು ಉತ್ತರಾಖಂಡದ ಪಿಥೋರಗಢಕ್ಕೆ ಸಂಪರ್ಕಿಸುವ ರಸ್ತೆಯ ಕೆಲಸವೂ ಬಹುತೇಕ ಪೂರ್ಣಗೊಂಡಿದೆ. ಶ್ರೀನಗರ ಮತ್ತು ಜಮ್ಮು ನಡುವೆ 36 ಸುರಂಗಗಳನ್ನು ನಿರ್ಮಿಸಲಾಗುತ್ತಿದೆ.  ದೆಹಲಿಯಿಂದ ಚೆನ್ನೈಗೆ 240 ಕಿಲೋ ಮೀಟರ್‌ ದೂರ ಕಡಿಮೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

4 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

5 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

5 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

6 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

6 hours ago