ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ಅವರು ದಾವಣಗೆರೆಯಲ್ಲಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಹಾವೇರಿ, ಕೋಲಾರ, ಮಂಡ್ಯ ಶಿವಮೊಗ್ಗ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ 14 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀಥಲೀಕರಣ ಘಟಕಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು. ಸಚಿವ ಸಂಪುಟದ ನಿರ್ಣಯಗಳ ಅನ್ವಯ ತೋಟಗಾರಿಕಾ ವಲಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಚಿತ್ರದುರ್ಗ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ತೋಟಗಾರಿಕೆ ತರಬೇತಿ ಕೇಂದ್ರ ಮತ್ತು ಬೆಳಗಾವಿ ಜಿಲ್ಲೆಯ ಅರಬಾವಿಯಲ್ಲಿ 1 ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದ್ದು ಸುಮಾರು35 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಚಿವ ಮಲ್ಲಿಕಾರ್ಜುನ ತಿಳಿಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…