ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ ಮುಖ್ಯ. ಶಿವಮೊಗ್ಗ(Shimoga) ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ(Agumbe Ghat) ಸುರಂಗ ಮಾರ್ಗ(tunnel construction) ನಿರ್ಮಾಣಕ್ಕೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(National Highway Authority) ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಹಾಗಾದರೆ ಇದರಿಂದಾಗುವ ಲಾಭ ಅಥವಾ ನಷ್ಟಗಳೇನು..? ಇದಕ್ಕೆ ತಗಲುವ ವೆಚ್ಚ ಎಷ್ಟು ಸಾವಿರ ಕೋಟಿ? ಹಾಗೂ ಪರಿಸರದ ಮೇಲೆ ಯಾವೆಲ್ಲಾ ಪರಿಣಾಮಗಳನ್ನು ಬೀರುತ್ತೆ ಅನ್ನುವ ಬಗ್ಗೆ ಮಾಹಿತಿ ಇಲ್ಲಿದೆ..
ಇನ್ನು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿದ್ದು, 2 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಪಿಆರ್ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೋಮೇಶ್ವರದಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಗೆ ಸಂಪರ್ಕ ಕಲ್ಪಿಸುವ 12 ಕಿಲೋ ಮೀಟರ್ ದೂರದವರೆಗೆ 3,500 ಕೋಟಿ ರೂಪಾಯಿ ವೆಚ್ಚ ಎಂದು ನಿರೀಕ್ಷಿಸಲಾಗಿದೆ. ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ (169ಎ) ಚತುಷ್ಪಥ ಯೋಜನೆಯಡಿ ಸುರಂಗ ನಿರ್ಮಾಣ ಯೋಜನೆ ಇದಕ್ಕೆ ಸೇರಿಲ್ಲ. ಆದರೂ ದ್ವಿಪಥ ರಸ್ತೆ ನಿರ್ಮಾಣದ ಬದಲು ಸುರಂಗ ಯೋಜನೆ ಸೇರಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಾಣ ಲೆಕ್ಕಾಚಾರವು ಅಪಾಯದ ಕರೆಗಂಟೆ ಎಂಬುದು ಕೆಲ ಪರಿಸರವಾದಿಗಳ ಲೆಕ್ಕಚಾರ. ಒಂದು ವೇಳೆ, ಈ ಯೋಜನೆಗೆ ಸರಕಾರ ಮುಂದಾದರೆ, ತುಂಬಲಾರದಷ್ಟು ಪರಿಸರ ನಾಶವಾಗಲಿದೆ. ಪ್ರಸ್ತುತ ಆಗುಂಬೆ ಘಾಟಿಯಲ್ಲಿ ಉದ್ದೇಶಿತ ಸುರಂಗ ಮಾರ್ಗದ ಉದ್ದ 12 ಕಿ.ಮೀ. ಇದೆ. ಘಾಟಿ ಕೊರೆದು ಇಂತಹ ಎರಡು ಟನಲ್ಗಳನ್ನು ನಿರ್ಮಾಣ ಮಾಡುವುದರಿಂದ ಭವಿಷ್ಯದಲ್ಲಿ ಪ್ರಕ್ರತಿ ವಿಕೋಪಕ್ಕೆ ನಾಂದಿಯಾಗಲಿದೆ. ಮಲ್ಪೆ- ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169ಎ) ಚತುಷ್ಪಥ ಯೋಜನೆ ಪ್ರಗತಿಯಲ್ಲಿದ್ದು, ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡುವುದಕ್ಕೆ ಕೇಂದ್ರ ಸರಕಾರವು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಗೆ ನೀಡಿದೆ. 2 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್ ಸಿದ್ಧವಾಗಲಿದೆ.
ಟನಲ್ನಿಂದಾಗುವ ನಷ್ಟ :
ಈ ಹಿಂದೆ ನಿತಿನ್ ಗಡ್ಕರಿ ಏನು ಹೇಳಿದ್ದರು? : 2022ರಲ್ಲಿ ಶಿರಾಡಿ ಘಾಟ್ನಲ್ಲಿ ಸುರಂಗ ರಸ್ತೆ ನಿರ್ಮಿಸುವ ಕುರಿತಾಗಿ ಪ್ರಸ್ತಾಪ ಕೇಳಿ ಬಂದಿತ್ತು. ಆದರೆ ಈ ಕುರಿತ ಪರಾಮರ್ಶೆ ಬಳಿಕ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸಾಧ್ಯವಿಲ್ಲ ಎಂದು ಹೇಳಿದ್ದರು. 26 ಕಿಲೋ ಮೀಟರ್ ಸುರಂಗ ರಸ್ತೆ ಬದಲಿಗೆ ಶಿರಾಡಿ ಘಾಟ್ ರಸ್ತೆ ವಿಸ್ತರಣೆ ಸೂಕ್ತ ಎಂದು ಸಚಿವರು ಲೋಕಸಭೆಗೆ ಮಾಹಿತಿ ನೀಡಿದ್ದರು. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75, ಮಂಗಳೂರು ಹಾಗೂ ಬೆಂಗಳೂರು ನಗರವನ್ನು ಸಂಪರ್ಕಿಸುತ್ತದೆ. ಸುರಂಗ ರಸ್ತೆ ನಿರ್ಮಾಣ ಯೋಜನೆಯ ಪ್ರಸ್ತಾಪವನೆಯನ್ನು ಕೇಂದ್ರ ಸರ್ಕಾರ ಕೈ ಬಿಟ್ಟ ಬಳಿಕ ಈ ಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು.
(ಮೂಲ: ವಿಜಯ ಕರ್ನಾಟಕ)
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…