Advertisement
ಪ್ರಮುಖ

#Mantralaya |ಮಂತ್ರಾಲಯದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣ | ಅಮಿತ್ ಶಾ ಅವರಿಂದ ಶಂಕುಸ್ಥಾಪನೆ

Share

ಮರ್ಯಾದ ಪುರುಷನ ಮೂಲಸ್ಥಾನ ಅಯೋಧ್ಯೆಯಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಇದೀಗ ಮಂತ್ರಾಲಯದ ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್‌ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಗುಜರಾತ್‌ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್‌ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

15 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

6 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

7 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

9 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

15 hours ago