ಮರ್ಯಾದ ಪುರುಷನ ಮೂಲಸ್ಥಾನ ಅಯೋಧ್ಯೆಯಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಇದೀಗ ಮಂತ್ರಾಲಯದ ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಗುಜರಾತ್ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…