Advertisement
Opinion

ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿ : ಇದರಿಂದಾಗುವ ಪ್ರಯೋಜನಗಳೇನು..?

Share

ಯಾವುದೇ ಕಾಯಿಲೆ(Decease) ಇರಲಿ ಹೊಟ್ಟೆ ತುಂಬ ಊಟ(Meal) ಮಾಡಿದ ನಂತರ ಔಷಧ ಸೇವಿಸಬೇಕು ಎನ್ನುವುದು ವಾಡಿಕೆ. ಆದರೆ ಕೆಲವು ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ(Empty stomach) ಸೇವಿಸುವುದೇ ಒಳಿತು. ಯೇಲ್ ವಿಶ್ವವಿದ್ಯಾನಿಲಯ ಮತ್ತು ಬ್ರಿಟಿಷ್ ನ್ಯೂರೋಸೈನ್ಸ್ ಅಸೋಸಿಯೇಷನ್‌ನ ಸಂಶೋಧಕರ ಪ್ರಕಾರ, ನೀವು ಖಾಲಿ ಹೊಟ್ಟೆಯಲ್ಲಿರುವಾಗ ಅದು ಹಸಿವನ್ನು ಉತ್ತೇಜಿಸುತ್ತದೆ. ಆಗ ಹೊಟ್ಟೆಯ ಹಾರ್ಮೋನ್(Harmon) ಹೊಸ ಮೆದುಳಿನ ಕೋಶಗಳ(brain cell) ಬೆಳವಣಿಗೆ ಹೊಂದಲು ಸಹಾಯ ಮಾಡುತ್ತದೆ.

ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚಗಿನ ನೀರಿಗೆ ಜೇನುತುಪ್ಪ ಹಾಗೂ ನಿಂಬೆರಸ ಸೇರಿಸಿ ಕುಡಿದರೆ ಬೊಜ್ಜು ಕಡಿಮೆಯಾಗುತ್ತದೆ. ಜೇಷ್ಠಮದ್ದು, ಹಿಪ್ಪಲಿ, ಜಾಯಿಕಾಯಿ, ಗದಗನಕಾಯಿ, ಶುಂಠಿ, ಮೆಣಸಿನ ಕಾಳನ್ನು ತೇಯ್ದು ಮಗುವಿಗೆ ಒಂದು ಚಮಚದಷ್ಟು ಮುಂಜಾನೆ ನೀಡಿದರೆ ಜಂತು ಹುಳುವಿನ ಸಮಸ್ಯೆ ಉಂಟಾಗದು. ಹಸಿದ ಹೊಟ್ಟೆಯಲ್ಲಿ ಮೂರು ಲೋಟ ನೀರು ಕುಡಿದು 45 ನಿಮಿಷಗಳ ನಂತರ ಆಹಾರ ಸೇವಿಸಬೇಕು. ಉತ್ತಮ ಚಯಾಪಚಯ ಕ್ರಿಯೆಗೆ, ತ್ವಚೆಯ ಕಾಂತಿ ಹೆಚ್ಚಲು, ಬೊಜ್ಜಿನ ಸಮಸ್ಯೆ ನಿವಾರಿಸಲು, ಹೊಳೆಯುವ ಹಾಗೂ ಆರೋಗ್ಯಕರ ಕೂದಲ ಬೆಳವಣಿಗೆಗೆ ಇದು ಸಹಕಾರಿ. ಹಸಿದ ಹೊಟ್ಟೆಯಲ್ಲಿ ನೀರು ಕುಡಿಯುವುದು ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಮೂತ್ರಕೋಶದ ಸೋಂಕಿಗೆ ಉತ್ತಮ ಮದ್ದು. ಹಸಿದ ಹೊಟ್ಟೆಯಲ್ಲಿ ನೀರು ಕುಡಿಯುವುದು ಹೊಟ್ಟೆ ಮತ್ತು ಎದೆಯುರಿಯನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿನ ವಿಷದ ಅಂಶವನ್ನು ಹೊರಹಾಕುತ್ತದೆ.

ಹಲ್ಲುಜ್ಜಿದ ನಂತರ ಹಸಿದ ಹೊಟ್ಟೆಯಲ್ಲೇ 10–15 ಕರಿಬೇವು ಹಾಗೂ ಅರ್ಧ ಚಮಚ ಜೀರಿಗೆಯನ್ನು ಸೇವಿಸುವ ರೂಢಿ ಮಾಡಿಕೊಂಡರೆ ಅನೇಕ ಲಾಭಗಳಿವೆ. ಕೂದಲು ಉದುರುವಿಕೆ ಕಡಿಮೆ ಆಗುತ್ತದೆ. ದೃಷ್ಟಿ ದೋಷ ಸಮಸ್ಯೆಗೂ ಪರಿಹಾರ ನೀಡಬಲ್ಲುದು. ಖಾಲಿ ಹೊಟ್ಟೆಗೆ ಕರಿಬೇವು ಸೇವನೆ ಗ್ಯಾಸ್ಟ್ರಿಕ್‌ ಹಾಗೂ ಅಸಿಡಿಟಿಗೆ ರಾಮಬಾಣ, ಕೀಲುನೋವು ಕಡಿಮೆಯಾಗುತ್ತದೆ ಮತ್ತು ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಹಾಗೂ ಆ್ಯಸಿಡಿಟಿ ಸಮಸ್ಯೆಗೆ ರಾಮಬಾಣ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸಂಧಿ ನೋವು ಮುಂತಾದ ಸಮಸ್ಯೆಗಳಿಗೆ ಕರಿಬೇವು ಸೇವನೆ ಪರಿಹಾರ ನೀಡುತ್ತದೆ.ಕರಿಬೇವು ಸೇವನೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುತ್ತದೆ.

ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ನೀಡುತ್ತದೆ. ಕಹಿಬೇವನ್ನು ಅರೆದು ಮುಂಜಾನೆ ಕುಡಿದರೆ ದೊಡ್ಡವರಲ್ಲಿ ಜಂತು ಹುಳುವಿನ ಸಮಸ್ಯೆ ಉಂಟಾಗುವುದಿಲ್ಲ. ವಾಯು ಸಂಬಂಧಿ ಸಮಸ್ಯೆಯನ್ನೂ ನಿವಾರಿಸುವ ಶಕ್ತಿ ಇದಕ್ಕಿದೆ.ಹಸಿದ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಹೊಟ್ಟೆಯನ್ನು ಬ್ಯಾಕ್ಟೀರಿಯಾದಿಂದ ಮುಕ್ತಗೊಳಿಸುತ್ತದೆ. ಜೀರ್ಣಕ್ರಿಯೆ ಉತ್ತಮವಾಗುತ್ತದೆ.ಉದ್ವೇಗ ಹಾಗೂ ಆತಂಕದಿಂದ ಎದೆಬಡಿತ ಹೆಚ್ಚುವ ಸಮಸ್ಯೆ ನಿಮ್ಮಲ್ಲಿದ್ದರೆ ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಸೀಬೆ ಹಣ್ಣು ಸೇವಿಸುವುದು ಅತ್ಯುತ್ತಮ.

– ಸಂಗ್ರಹ ಮಾಹಿತಿ
Although not eating makes some people irritable, there’s some good evidence to show that it can make you more productive. According to researchers from Yale University and the British Neuroscience Association, the stomach hormone that stimulates hunger when you have an empty stomach also promotes new brain cell growth
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago