Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

Advertisement
Advertisement

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago